Matthew (Kannada)
1
1:1b.MAT.001.001 ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
1:2b.MAT.001.002 ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
1:3b.MAT.001.003 ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
1:4b.MAT.001.004 ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು;
1:5b.MAT.001.005 ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
1:6b.MAT.001.006 ಇಷಯನಿಂದ ಅರಸನಾದ ದಾವೀದನು ಹುಟ್ಟಿದನು. ಅರಸನಾದ ದಾವೀದನಿಂದ ಊರೀಯನ ಹೆಂಡತಿ ಯಾಗಿದ್ದವಳಲ್ಲಿ ಸೊಲೊಮೋನನು ಹುಟ್ಟಿದನು;
1:7b.MAT.001.007 ಸೊಲೊಮೋನನಿಂದ ರೆಹಬ್ಬಾಮನು ಹುಟ್ಟಿದನು; ರೆಹಬ್ಬಾಮನಿಂದ ಅಬೀಯನು ಹುಟ್ಟಿದನು; ಅಬೀಯನಿಂದ ಆಸನು ಹುಟ್ಟಿದನು;
1:8b.MAT.001.008 ಆಸನಿಂದ ಯೆಹೋಷಾಫಾಟನು ಹುಟ್ಟಿದನು; ಯೆಹೋಷಾ ಫಾಟನಿಂದ ಯೆಹೋರಾಮನು ಹುಟ್ಟಿದನು; ಯೆಹೋ ರಾಮನಿಂದ ಉಜ್ಜೀಯನು ಹುಟ್ಟಿದನು;
1:9b.MAT.001.009 ಉಜ್ಜೀಯ ನಿಂದ ಯೋತಾಮನು ಹುಟ್ಟಿದನು; ಯೋತಾಮನಿಂದ ಆಹಾಜನು ಹುಟ್ಟಿದನು; ಆಹಾಜನಿಂದ ಹಿಜ್ಕೀಯನು ಹುಟ್ಟಿದನು;
1:10b.MAT.001.010 ಹಿಜ್ಕೀಯನಿಂದ ಮನಸ್ಸೆಯು ಹುಟ್ಟಿದನು; ಮನಸ್ಸೆಯಿಂದ ಆಮೋನನು ಹುಟ್ಟಿದನು; ಆಮೋನನಿಂದ ಯೋಷೀಯನು ಹುಟ್ಟಿದನು;
1:11b.MAT.001.011 ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
1:12b.MAT.001.012 ಅವರು ಬಾಬೆಲಿಗೆ ಬಂದ ಮೇಲೆ ಯೆಕೂನ್ಯ ನಿಂದ ಶೆಯಲ್ತಿಯೇಲನು ಹುಟ್ಟಿದನು; ಶೆಯೆಲ್ತಿ ಯೇಲಿನಿಂದ ಜೆರುಬ್ಬಾಬೆಲನು ಹುಟ್ಟಿದನು;
1:13b.MAT.001.013 ಜೆರುಬ್ಬಾಬೆಲನಿಂದ ಅಬಿಹೂದನು ಹುಟ್ಟಿದನು; ಅಬಿಹೂದನಿಂದ ಎಲ್ಯಕೀಮನು ಹುಟ್ಟಿದನು; ಎಲ್ಯ ಕೀಮನಿಂದ ಅಜೋರನು ಹುಟ್ಟಿದನು;
1:14b.MAT.001.014 ಅಜೋರ ನಿಂದ ಸದೋಕನು ಹುಟ್ಟಿದನು; ಸದೋಕನಿಂದ ಅಖೀಮನು ಹುಟ್ಟಿದನು; ಅಖೀಮನಿಂದ ಎಲಿ ಹೂದನು ಹುಟ್ಟಿದನು;
1:15b.MAT.001.015 ಎಲಿಹೂದನಿಂದ ಎಲಿ ಯಾಜರನು ಹುಟ್ಟಿದನು; ಎಲಿಯಾಜರನಿಂದ ಮತ್ತಾನ ನು ಹುಟ್ಟಿದನು; ಮತ್ತಾನನಿಂದ ಯಾಕೋಬನು ಹುಟ್ಟಿದನು;
1:16b.MAT.001.016 ಕ್ರಿಸ್ತನೆಂದು ಕರೆಯಲ್ಪಟ್ಟ ಯೇಸು ಮರಿ ಯಳಲ್ಲಿ ಹುಟ್ಟಿದನು; ಆಕೆಯ ಗಂಡನಾದ ಯೋಸೇ ಫನು ಯಾಕೋಬನಿಂದ ಹುಟ್ಟಿದನು.
1:17b.MAT.001.017 ಹೀಗೆ ಅಬ್ರಹಾಮನಿಂದ ದಾವೀದನ ವರೆಗೆ ಒಟ್ಟು ಹದಿನಾಲ್ಕು ತಲೆಗಳು; ದಾವೀದನು ಮೊದಲು ಗೊಂಡು ಬಾಬೆಲಿಗೆ ಸೆರೆಹೋಗುವ ವರೆಗೆ ಹದಿ ನಾಲ್ಕು ತಲೆಗಳು; ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನ ವರೆಗೆ ಹದಿನಾಲ್ಕು ತಲೆಗಳು.
1:18b.MAT.001.018 ಯೇಸು ಕ್ರಿಸ್ತನ ಜನನವು ಹೀಗಾಯಿತು: ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದಾಗ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಗರ್ಭಿಣಿಯಾದದ್ದು ಕಂಡು ಬಂತು.
1:19b.MAT.001.019 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
1:20b.MAT.001.020 ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ.
1:21b.MAT.001.021 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
1:22b.MAT.001.022 ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
1:23b.MAT.001.023 ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
1:24b.MAT.001.024 ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
1:25b.MAT.001.025 ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
2
2:1b.MAT.002.001 ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
2:2b.MAT.002.002 ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
2:3b.MAT.002.003 ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
2:4b.MAT.002.004 ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
2:5b.MAT.002.005 ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ--
2:6b.MAT.002.006 ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
2:7b.MAT.002.007 ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು
2:8b.MAT.002.008 ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
2:9b.MAT.002.009 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
2:10b.MAT.002.010 ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.
2:11b.MAT.002.011 ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
2:12b.MAT.002.012 ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
2:13b.MAT.002.013 ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
2:14b.MAT.002.014 ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು.
2:15b.MAT.002.015 ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು.
2:16b.MAT.002.016 ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
2:17b.MAT.002.017 ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು;
2:18b.MAT.002.018 ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.
2:19b.MAT.002.019 ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--
2:20b.MAT.002.020 ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.
2:21b.MAT.002.021 ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿ ಯನ್ನೂ ಕರಕೊಂಡು ಇಸ್ರಾಯೇಲ್ ದೇಶಕ್ಕೆ ಬಂದಾಗ
2:22b.MAT.002.022 ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯದಲ್ಲಿ ಆಳುತ್ತಿದ್ದಾನೆಂದು ಕೇಳಿ ಅಲ್ಲಿಗೆ ಹೋಗುವದಕ್ಕೆ ಭಯಪಟ್ಟನು; ಆದಾಗ್ಯೂ ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟವನಾಗಿ ಗಲಿಲಾಯ ಪ್ರಾಂತ್ಯದ ಕಡೆಗೆ ತಿರುಗಿಕೊಂಡನು.ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
2:23b.MAT.002.023 ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು; ಇದರಿಂದ--ಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು.
3
3:1b.MAT.003.001 ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
3:2b.MAT.003.002 ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
3:3b.MAT.003.003 ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
3:4b.MAT.003.004 ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
3:5b.MAT.003.005 ಆಗ ಯೆರೂಸಲೇಮಿನವರೂ ಎಲ್ಲಾ ಯೂದಾಯ ದವರೂ ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಪ್ರದೇಶದವರೂ ಅವನ ಬಳಿಗೆ ಹೊರಟುಹೋದರು.
3:6b.MAT.003.006 ಅವರು ತಮ್ಮ ಪಾಪಗಳನ್ನು ಅರಿಕೆಮಾಡಿ ಯೊರ್ದನಿನಲ್ಲಿ ಅವನಿಂದ ಬಾಪ್ತಿಸ್ಮ ಮಾಡಿಕೊಂಡರು.
3:7b.MAT.003.007 ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
3:8b.MAT.003.008 ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
3:9b.MAT.003.009 ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
3:10b.MAT.003.010 ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
3:11b.MAT.003.011 ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
3:12b.MAT.003.012 ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
3:13b.MAT.003.013 ಆಗ ಯೇಸು ಯೋಹಾನನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದ ನಿಗೆ ಬಂದನು.
3:14b.MAT.003.014 ಆದರೆ ಯೋಹಾನನು ಆತನನ್ನು ತಡೆದು--ನಾನು ನಿನ್ನಿಂದ ಬಾಪ್ತಿಸ್ಮ ಮಾಡಿಸಿ ಕೊಳ್ಳುವದು ಅಗತ್ಯವಿರಲಾಗಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿದನು.
3:15b.MAT.003.015 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಸದ್ಯಕ್ಕೆ ಒಪ್ಪಿಕೋ; ಯಾಕಂದರೆ ಎಲ್ಲಾ ನೀತಿಯನ್ನು ಹೀಗೆ ನೆರವೇರಿ ಸುವದು ನಮಗೆ ಯೋಗ್ಯವಾಗಿದೆ ಎಂದು ಹೇಳಿದನು. ಆಗ ಅವನು ಒಪ್ಪಿಕೊಂಡನು.
3:16b.MAT.003.016 ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
3:17b.MAT.003.017 ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
4
4:1b.MAT.004.001 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
4:2b.MAT.004.002 ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
4:3b.MAT.004.003 ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
4:4b.MAT.004.004 ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
4:5b.MAT.004.005 ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
4:6b.MAT.004.006 ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
4:7b.MAT.004.007 ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
4:8b.MAT.004.008 ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
4:9b.MAT.004.009 ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
4:10b.MAT.004.010 ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
4:11b.MAT.004.011 ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
4:12b.MAT.004.012 ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
4:13b.MAT.004.013 ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
4:14b.MAT.004.014 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
4:15b.MAT.004.015 ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
4:16b.MAT.004.016 ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
4:17b.MAT.004.017 ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
4:18b.MAT.004.018 ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
4:19b.MAT.004.019 ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
4:20b.MAT.004.020 ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
4:21b.MAT.004.021 ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
4:22b.MAT.004.022 ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
4:23b.MAT.004.023 ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
4:24b.MAT.004.024 ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
4:25b.MAT.004.025 ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
5
5:1b.MAT.005.001 ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.
5:2b.MAT.005.002 ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --
5:3b.MAT.005.003 ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
5:4b.MAT.005.004 ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
5:5b.MAT.005.005 ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
5:6b.MAT.005.006 ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
5:7b.MAT.005.007 ಕರುಣೆಯುಳ್ಳವರು ಧನ್ಯರು; ಯಾಕಂದರೆ ಅವರು ಕರುಣೆ ಹೊಂದುವರು.
5:8b.MAT.005.008 ಶುದ್ಧ ಹೃದಯವುಳ್ಳವರು ಧನ್ಯರು; ಯಾಕಂದರೆ ಅವರು ದೇವರನ್ನು ನೋಡುವರು.
5:9b.MAT.005.009 ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
5:10b.MAT.005.010 ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
5:11b.MAT.005.011 ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
5:12b.MAT.005.012 ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
5:13b.MAT.005.013 ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
5:14b.MAT.005.014 ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
5:15b.MAT.005.015 ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
5:16b.MAT.005.016 ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
5:17b.MAT.005.017 ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
5:18b.MAT.005.018 ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
5:19b.MAT.005.019 ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
5:20b.MAT.005.020 ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
5:21b.MAT.005.021 ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
5:22b.MAT.005.022 ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
5:23b.MAT.005.023 ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
5:24b.MAT.005.024 ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
5:25b.MAT.005.025 ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
5:26b.MAT.005.026 ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
5:27b.MAT.005.027 ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;
5:28b.MAT.005.028 ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
5:29b.MAT.005.029 ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
5:30b.MAT.005.030 ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
5:31b.MAT.005.031 ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
5:32b.MAT.005.032 ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
5:33b.MAT.005.033 ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
5:34b.MAT.005.034 ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
5:35b.MAT.005.035 ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
5:36b.MAT.005.036 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ.
5:37b.MAT.005.037 ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
5:38b.MAT.005.038 ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.
5:39b.MAT.005.039 ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
5:40b.MAT.005.040 ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.
5:41b.MAT.005.041 ಮತ್ತು ಯಾವನಾದರೂ ಒಂದು ಮೈಲು ಹೋಗುವಂತೆ ನಿನ್ನನ್ನು ಬಲವಂತ ಮಾಡಿದರೆ ಅವನೊಂದಿಗೆ ಎರಡು ಮೈಲು ಹೋಗು.
5:42b.MAT.005.042 ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
5:43b.MAT.005.043 ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
5:44b.MAT.005.044 ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
5:45b.MAT.005.045 ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
5:46b.MAT.005.046 ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
5:47b.MAT.005.047 ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
5:48b.MAT.005.048 ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
6
6:1b.MAT.006.001 ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
6:2b.MAT.006.002 ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
6:3b.MAT.006.003 ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
6:4b.MAT.006.004 ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
6:5b.MAT.006.005 ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
6:6b.MAT.006.006 ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
6:7b.MAT.006.007 ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
6:8b.MAT.006.008 ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
6:9b.MAT.006.009 ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
6:10b.MAT.006.010 ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
6:11b.MAT.006.011 ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
6:12b.MAT.006.012 ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
6:13b.MAT.006.013 ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
6:14b.MAT.006.014 ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
6:15b.MAT.006.015 ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
6:16b.MAT.006.016 ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
6:17b.MAT.006.017 ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
6:18b.MAT.006.018 ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
6:19b.MAT.006.019 ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
6:20b.MAT.006.020 ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
6:21b.MAT.006.021 ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
6:22b.MAT.006.022 ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
6:23b.MAT.006.023 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
6:24b.MAT.006.024 ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
6:25b.MAT.006.025 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
6:26b.MAT.006.026 ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
6:27b.MAT.006.027 ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
6:28b.MAT.006.028 ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
6:29b.MAT.006.029 ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
6:30b.MAT.006.030 ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
6:31b.MAT.006.031 ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
6:32b.MAT.006.032 (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
6:33b.MAT.006.033 ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
6:34b.MAT.006.034 ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
7
7:1b.MAT.007.001 ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
7:2b.MAT.007.002 ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
7:3b.MAT.007.003 ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
7:4b.MAT.007.004 ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
7:5b.MAT.007.005 ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
7:6b.MAT.007.006 ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
7:7b.MAT.007.007 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
7:8b.MAT.007.008 ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
7:9b.MAT.007.009 ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
7:10b.MAT.007.010 ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
7:11b.MAT.007.011 ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
7:12b.MAT.007.012 ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
7:13b.MAT.007.013 ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
7:14b.MAT.007.014 ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
7:15b.MAT.007.015 ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
7:16b.MAT.007.016 ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
7:17b.MAT.007.017 ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
7:18b.MAT.007.018 ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
7:19b.MAT.007.019 ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
7:20b.MAT.007.020 ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
7:21b.MAT.007.021 ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
7:22b.MAT.007.022 ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
7:23b.MAT.007.023 ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
7:24b.MAT.007.024 ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
7:25b.MAT.007.025 ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
7:26b.MAT.007.026 ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
7:27b.MAT.007.027 ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
7:28b.MAT.007.028 ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
7:29b.MAT.007.029 ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
8
8:1b.MAT.008.001 ಆತನು ಪರ್ವತವನ್ನಿಳಿದು ಬಂದಾಗ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
8:2b.MAT.008.002 ಆಗ ಇಗೋ, ಒಬ್ಬ ಕುಷ್ಠರೋಗಿಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಅಂದನು.
8:3b.MAT.008.003 ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
8:4b.MAT.008.004 ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
8:5b.MAT.008.005 ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
8:6b.MAT.008.006 ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
8:7b.MAT.008.007 ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.
8:8b.MAT.008.008 ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
8:9b.MAT.008.009 ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
8:10b.MAT.008.010 ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
8:11b.MAT.008.011 ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
8:12b.MAT.008.012 ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
8:13b.MAT.008.013 ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
8:14b.MAT.008.014 ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.
8:15b.MAT.008.015 ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
8:16b.MAT.008.016 ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
8:17b.MAT.008.017 ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.
8:18b.MAT.008.018 ಇದಾದಮೇಲೆ ಯೇಸು ತನ್ನ ಸುತ್ತಲೂ ಇದ್ದ ಜನರ ದೊಡ್ಡ ಸಮೂಹಗಳನ್ನು ನೋಡಿ ಆಚೆಕಡೆಗೆ ಹೊರಟುಹೋಗುವಂತೆ ಅಪ್ಪಣೆ ಕೊಟ್ಟನು.
8:19b.MAT.008.019 ಆಗ ಒಬ್ಬ ಶಾಸ್ತ್ರಿಯು ಬಂದು ಆತನಿಗೆ--ಬೋಧಕನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿ ಸುವೆನು ಅಂದನು.
8:20b.MAT.008.020 ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
8:21b.MAT.008.021 ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು.
8:22b.MAT.008.022 ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
8:23b.MAT.008.023 ಆತನು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
8:24b.MAT.008.024 ಆಗ ಇಗೋ, ಸಮುದ್ರದಲ್ಲಿ ದೊಡ್ಡ ತುಫಾನು ಎದ್ದ ಕಾರಣ ದೋಣಿಯು ತೆರೆಗಳಿಂದ ಮುಚ್ಚಲ್ಪಟ್ಟಿತು; ಆದರೆ ಆತನು ನಿದ್ರಿಸುತ್ತಿದ್ದನು.
8:25b.MAT.008.025 ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.
8:26b.MAT.008.026 ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
8:27b.MAT.008.027 ಆದರೆ ಅವರು ಆಶ್ಚರ್ಯದಿಂದ--ಈತನು ಎಂಥಾ ಮನುಷ್ಯ ನಾಗಿರಬಹುದು! ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ಅಂದರು.
8:28b.MAT.008.028 ಆತನು ಆಚೆಯ ದಡದ ಗದರೇನರ ದೇಶಕ್ಕೆ ಬಂದಾಗ ದೆವ್ವಗಳು ಹಿಡಿದಿದ್ದ ಇಬ್ಬರು ಸಮಾಧಿ ಗಳೊಳಗಿಂದ ಆತನ ಎದುರಿಗೆ ಬಂದರು. ಅವರು ಬಹು ಉಗ್ರತೆಯುಳ್ಳವರಾಗಿದ್ದದರಿಂದ ಯಾವ ಮನು ಷ್ಯನೂ ಆ ಮಾರ್ಗವಾಗಿ ಹೋಗುವ ಹಾಗಿದ್ದಿಲ್ಲ.
8:29b.MAT.008.029 ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
8:30b.MAT.008.030 ಆಗ ಅವರಿಗೆ ಬಹು ದೂರದಲ್ಲಿ ಬಹಳ ಹಂದಿಗಳ ಗುಂಪು ಮೇಯುತ್ತಿತ್ತು.
8:31b.MAT.008.031 ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
8:32b.MAT.008.032 ಆತನು ಅವುಗಳಿಗೆ--ಹೋಗಿರಿ ಅಂದನು. ಆಗ ಅವು ಹೊರಗೆ ಬಂದು ಹಂದಿಗಳ ಗುಂಪಿನೊಳಗೆ ಸೇರಿಕೊಂಡವು; ಆಗ ಇಗೋ, ಹಂದಿಗಳ ಗುಂಪೆಲ್ಲಾ ಸಮುದ್ರದ ಕಡಿದಾದ ಸ್ಥಳಕ್ಕೆ ಉಗ್ರವಾಗಿ ಓಡಿಹೋಗಿ ನೀರಿನಲ್ಲಿ ಬಿದ್ದು ಸತ್ತು ಹೋದವು.
8:33b.MAT.008.033 ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರು.ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
8:34b.MAT.008.034 ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
9
9:1b.MAT.009.001 ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
9:2b.MAT.009.002 ಇಗೋ, ಹಾಸಿಗೆಯ ಮೇಲೆ ಮಲಗಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಆತನ ಬಳಿಗೆ ತಂದರು; ಮತ್ತು ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು.
9:3b.MAT.009.003 ಆಗ ಇಗೋ, ಶಾಸ್ತ್ರಿಗಳಲ್ಲಿ ಕೆಲವರು-- ಈ ಮನುಷ್ಯನು ದೇವದೂಷಣೆ ಮಾಡುತ್ತಾನೆ ಎಂದು ತಮ್ಮತಮ್ಮಲ್ಲಿ ಅಂದುಕೊಂಡರು.
9:4b.MAT.009.004 ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
9:5b.MAT.009.005 ಯಾವದು ಸುಲಭ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
9:6b.MAT.009.006 ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.
9:7b.MAT.009.007 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.
9:8b.MAT.009.008 ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
9:9b.MAT.009.009 ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
9:10b.MAT.009.010 ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು.
9:11b.MAT.009.011 ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
9:12b.MAT.009.012 ಆದರೆ ಯೇಸು ಅದನ್ನು ಕೇಳಿ ಅವರಿಗೆ--ಕ್ಷೇಮದಿಂದಿರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವ ರಿಗೆ ವೈದ್ಯನು ಬೇಕು.
9:13b.MAT.009.013 ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
9:14b.MAT.009.014 ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು.
9:15b.MAT.009.015 ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
9:16b.MAT.009.016 ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು.
9:17b.MAT.009.017 ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
9:18b.MAT.009.018 ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
9:19b.MAT.009.019 ಆಗ ಯೇಸು ಎದ್ದು ತನ್ನ ಶಿಷ್ಯರೊಂದಿಗೆ ಅವನ ಹಿಂದೆ ಹೋದನು.
9:20b.MAT.009.020 ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು.
9:21b.MAT.009.021 ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
9:22b.MAT.009.022 ಆದರೆ ಯೇಸು ಹಿಂತಿರುಗಿ ಆಕೆಯನ್ನು ನೋಡಿ--ಮಗಳೇ, ಸಮಾಧಾನದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ ಅಂದನು. ಅದೇ ಗಳಿಗೆಯಲ್ಲಿ ಆ ಸ್ತ್ರೀಯು ಸ್ವಸ್ಥಳಾದಳು.
9:23b.MAT.009.023 ತರುವಾಯ ಯೇಸು ಆ ಅಧಿಕಾರಿಯ ಮನೆ ಯೊಳಗೆ ಬಂದು ಕೊಳಲೂದುವವರನ್ನೂ ಗೊಂದಲ ಮಾಡುವ ಜನರನ್ನೂ ನೋಡಿ
9:24b.MAT.009.024 ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.
9:25b.MAT.009.025 ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು.
9:26b.MAT.009.026 ಇದರ ಕೀರ್ತಿಯು ಆ ದೇಶದಲ್ಲೆಲ್ಲಾ ಹರಡಿತು.
9:27b.MAT.009.027 ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
9:28b.MAT.009.028 ಆತನು ಮನೆಯೊಳಕ್ಕೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು; ಆಗ ಯೇಸು ಅವರಿಗೆ--ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ ಎಂದು ಕೇಳಿದಾಗ ಅವರು ಆತನಿಗೆ--ಕರ್ತನೇ, ಹೌದು ಎಂದು ಅಂದರು.
9:29b.MAT.009.029 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ--ನಿಮ್ಮ ನಂಬಿಕೆಯಂತೆ ನಿಮಗಾಗಲಿ ಎಂದು ಹೇಳಿದನು.
9:30b.MAT.009.030 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.
9:31b.MAT.009.031 ಆದರೆ ಅವರು ಹೊರಟುಹೋಗಿ ಆ ಸೀಮೆಯಲ್ಲೆಲ್ಲಾ ಆತನ ಕೀರ್ತಿಯನ್ನು ಹಬ್ಬಿಸಿದರು.
9:32b.MAT.009.032 ಅವರು ಹೊರಟು ಹೋಗುತ್ತಿದ್ದಾಗ ಇಗೋ, ದೆವ್ವ ಹಿಡಿದಿದ್ದ ಮೂಕನಾದ ಒಬ್ಬ ಮನುಷ್ಯನನ್ನು ಅವರು ಆತನ ಬಳಿಗೆ ತಂದರು.
9:33b.MAT.009.033 ಮತ್ತು ದೆವ್ವವು ಹೊರಗೆ ಹಾಕಲ್ಪಟ್ಟ ಮೇಲೆ ಮೂಕನು ಮಾತಾಡಿದನು; ಆಗ ಜನಸಮೂಹಗಳವರು ಬೆರ ಗಾಗಿ--ಇಂಥದ್ದು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ ಎಂದು ಹೇಳಿದರು.
9:34b.MAT.009.034 ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
9:35b.MAT.009.035 ತರುವಾಯ ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಸಂಚರಿ ಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಿಸುತಾ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಪ್ರತಿಯೊಂದು ಅಸ್ವಸ್ಥತೆಯನ್ನೂ ರೋಗವನ್ನೂ ವಾಸಿಮಾಡಿದರು.
9:36b.MAT.009.036 ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
9:37b.MAT.009.037 ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
9:38b.MAT.009.038 ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
10
10:1b.MAT.010.001 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ತನ್ನ ಬಳಿಗೆ ಕರೆದು ಅಶುದ್ಧಾತ್ಮಗಳನ್ನು ಬಿಡಿಸುವಂತೆಯೂ ಎಲ್ಲಾ ತರವಾದ ರೋಗವನ್ನು ಮತ್ತು ಎಲ್ಲಾ ತರವಾದ ಅಸ್ವಸ್ಥತೆಯನ್ನು ಸ್ವಸ್ಥ ಮಾಡು ವಂತೆಯೂ ಅವರಿಗೆ ಅಧಿಕಾರ ಕೊಟ್ಟನು.
10:2b.MAT.010.002 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು: ಮೊದಲನೆಯವನು ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ ಮತ್ತು ಅವನ ಸಹೋದರನಾದ ಯೋಹಾನ,
10:3b.MAT.010.003 ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ,
10:4b.MAT.010.004 ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
10:5b.MAT.010.005 ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
10:6b.MAT.010.006 ಆದರೆ ತಪ್ಪಿಸಿಕೊಂಡ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ಹೋಗಿರಿ.
10:7b.MAT.010.007 ನೀವು ಹೋಗುವಾಗ-- ಪರಲೋಕ ರಾಜ್ಯವು ಸಮಾಪವಾಯಿತು ಎಂದು ಸಾರಿ ಹೇಳಿರಿ.
10:8b.MAT.010.008 ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
10:9b.MAT.010.009 ನಿಮ್ಮ ಹಮ್ಮಾಣಿಗಳಲ್ಲಿ ಬಂಗಾರ, ಬೆಳ್ಳಿ ಮತ್ತು ಹಿತ್ತಾಳೆ ಇಟ್ಟುಕೊಳ್ಳಬೇಡಿರಿ.
10:10b.MAT.010.010 ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ; ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
10:11b.MAT.010.011 ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ; ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ;
10:12b.MAT.010.012 ನೀವು ಒಂದು ಮನೆಯೊಳಕ್ಕೆ ಬಂದಾಗ ಅವರನ್ನು ವಂದಿಸಿರಿ.
10:13b.MAT.010.013 ಆ ಮನೆಯು ಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ಅದರ ಮೇಲೆ ಬರಲಿ; ಆದರೆ ಅದು ಅಯೋಗ್ಯವಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.
10:14b.MAT.010.014 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
10:15b.MAT.010.015 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು.
10:16b.MAT.010.016 ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
10:17b.MAT.010.017 ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
10:18b.MAT.010.018 ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.
10:19b.MAT.010.019 ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು.
10:20b.MAT.010.020 ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
10:21b.MAT.010.021 ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
10:22b.MAT.010.022 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು.
10:23b.MAT.010.023 ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
10:24b.MAT.010.024 ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ.
10:25b.MAT.010.025 ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
10:26b.MAT.010.026 ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
10:27b.MAT.010.027 ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
10:28b.MAT.010.028 ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
10:29b.MAT.010.029 ಒಂದು ಕಾಸಿಗೆ ಎರಡು ಗುಬ್ಬಿಗಳು ಮಾರಲ್ಪಡುತ್ತವಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವದಿಲ್ಲ.
10:30b.MAT.010.030 ಆದರೆ ನಿಮ್ಮ ತಲೆಯ ಕೂದಲುಗಳೆಲ್ಲಾ ಲೆಕ್ಕಿಸಲ್ಪಟ್ಟಿವೆ.
10:31b.MAT.010.031 ನೀವು ಬಹಳ ಗುಬ್ಬಿಗಳಿಗಿಂತ ಬಹು ಬೆಲೆಯುಳ್ಳವರಾಗಿದ್ದೀರಿ. ಆದದರಿಂದ ಭಯಪಡಬೇಡಿರಿ.
10:32b.MAT.010.032 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
10:33b.MAT.010.033 ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆದರೆ ಪರಲೋಕ ದಲ್ಲಿರುವ ನನ್ನ ತಂದೆಯ ಮುಂದೆ ನಾನೂ ಅವನನ್ನು ಅಲ್ಲಗಳೆಯುವೆನು.
10:34b.MAT.010.034 ನಾನು ಭೂಮಿಯ ಮೇಲೆ ಸಮಾಧಾನವನ್ನು ಕಳುಹಿಸುವದಕ್ಕಾಗಿ ಬಂದೆನೆಂದು ನೆನಸಬೇಡಿರಿ; ಖಡ್ಗ ವನ್ನಲ್ಲದೆ ಸಮಾಧಾನವನ್ನು ಕಳುಹಿಸುವದಕ್ಕೆ ನಾನು ಬಂದಿಲ್ಲ;
10:35b.MAT.010.035 ಹೇಗಂದರೆ ಮಗನಿಗೂ ಅವನ ತಂದೆಗೂ ಮಗಳಿಗೂ ಆಕೆಯ ತಾಯಿಗೂ ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವದಕ್ಕೆ ನಾನು ಬಂದಿದ್ದೇನೆ.
10:36b.MAT.010.036 ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
10:37b.MAT.010.037 ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
10:38b.MAT.010.038 ತನ್ನ ಶಿಲುಬೆ ಯನ್ನು ತೆಗೆದುಕೊಳ್ಳದೆ ನನ್ನನ್ನು ಹಿಂಬಾಲಿಸುವವನು ನನಗೆ ಯೋಗ್ಯನಲ್ಲ.
10:39b.MAT.010.039 ತನ್ನ ಪ್ರಾಣವನ್ನು ಕಂಡು ಕೊಳ್ಳುವವನು ಅದನ್ನು ಕಳಕೊಳ್ಳುವನು; ನನ್ನ ನಿಮಿತ್ತ ವಾಗಿ ತನ್ನ ಪ್ರಾಣವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
10:40b.MAT.010.040 ನಿಮ್ಮನ್ನು ಅಂಗೀಕರಿಸಿಕೊಳ್ಳುವವನು ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಮತ್ತು ನನ್ನನ್ನು ಅಂಗೀಕರಿಸಿ ಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನು ಅಂಗೀಕರಿಸಿ ಕೊಳ್ಳುತ್ತಾನೆ.
10:41b.MAT.010.041 ಪ್ರವಾದಿಯ ಹೆಸರಿನಲ್ಲಿ ಪ್ರವಾದಿ ಯನ್ನು ಅಂಗೀಕರಿಸುವವನು ಪ್ರವಾದಿಯ ಪ್ರತಿಫಲ ವನ್ನು ಪಡಕೊಳ್ಳುವನು; ನೀತಿವಂತನ ಹೆಸರಿನಲ್ಲಿ ನೀತಿವಂತನನ್ನು ಅಂಗೀಕರಿಸುವವನು ನೀತಿವಂತನ ಪ್ರತಿಫಲವನ್ನು ಪಡಕೊಳ್ಳುವನು.ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
10:42b.MAT.010.042 ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
11
11:1b.MAT.011.001 ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
11:2b.MAT.011.002 ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
11:3b.MAT.011.003 ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
11:4b.MAT.011.004 ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;
11:5b.MAT.011.005 ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
11:6b.MAT.011.006 ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
11:7b.MAT.011.007 ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
11:8b.MAT.011.008 ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
11:9b.MAT.011.009 ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
11:10b.MAT.011.010 ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
11:11b.MAT.011.011 ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
11:12b.MAT.011.012 ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
11:13b.MAT.011.013 ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
11:14b.MAT.011.014 ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
11:15b.MAT.011.015 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
11:16b.MAT.011.016 ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
11:17b.MAT.011.017 ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
11:18b.MAT.011.018 ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
11:19b.MAT.011.019 ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
11:20b.MAT.011.020 ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
11:21b.MAT.011.021 ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
11:22b.MAT.011.022 ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
11:23b.MAT.011.023 ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
11:24b.MAT.011.024 ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
11:25b.MAT.011.025 ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
11:26b.MAT.011.026 ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
11:27b.MAT.011.027 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
11:28b.MAT.011.028 ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
11:29b.MAT.011.029 ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
11:30b.MAT.011.030 ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
12
12:1b.MAT.012.001 ಆ ಸಮಯದಲ್ಲಿ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲವನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಹಸಿದಿ ದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
12:2b.MAT.012.002 ಆದರೆ ಫರಿಸಾಯರು ಅದನ್ನು ನೋಡಿ ಆತನಿಗೆ--ಇಗೋ, ನಿನ್ನ ಶಿಷ್ಯರು ಸಬ್ಬತ್ದಿನದಲ್ಲಿ ಮಾಡ ಬಾರದ್ದನ್ನು ಮಾಡುತ್ತಾರೆ ಅಂದರು.
12:3b.MAT.012.003 ಅದಕ್ಕೆ ಆತನು ಅವರಿಗೆ--ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂದು ನೀವು ಓದಲಿಲ್ಲವೋ?
12:4b.MAT.012.004 ಅವನು ದೇವರ ಮನೆ ಯೊಳಗೆ ಪ್ರವೇಶಿಸಿ ಯಾಜಕರೇ ಹೊರತು ತಾನಾಗಲೀ ತನ್ನ ಕೂಡ ಇದ್ದವರಾಗಲೀ ತಿನ್ನಬಾರದಾಗಿದ್ದ ಸಮ್ಮುಖ ರೊಟ್ಟಿಯನ್ನು ಹೇಗೆ ತಿಂದನು?
12:5b.MAT.012.005 ಇದಲ್ಲದೆ ಸಬ್ಬತ್ ದಿನಗಳಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ತನ್ನು ಅಪವಿತ್ರಪಡಿಸಿದರೂ ನಿರಪರಾಧಿಗಳಾಗಿದ್ದಾ ರೆಂದು ನೀವು ನ್ಯಾಯಪ್ರಮಾಣದಲ್ಲಿ ಓದಲಿಲ್ಲವೇ?
12:6b.MAT.012.006 ಆದರೆ ನಾನು ನಿಮಗೆ ಹೇಳುವದೇನಂದರೆ-- ದೇವಾಲಯಕ್ಕಿಂತಲೂ ದೊಡ್ಡವನು ಈ ಸ್ಥಳದಲ್ಲಿ ಇದ್ದಾನೆ.
12:7b.MAT.012.007 ಆದರೆ--ನನಗೆ ಯಜ್ಞವಲ್ಲ, ಕರುಣೆಯೇ ಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡು ತ್ತಿದ್ದಿಲ್ಲ.
12:8b.MAT.012.008 ಯಾಕಂದರೆ ಮನುಷ್ಯ ಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ ಎಂದು ಹೇಳಿದನು.
12:9b.MAT.012.009 ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು.
12:10b.MAT.012.010 ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು.
12:11b.MAT.012.011 ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ?
12:12b.MAT.012.012 ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು.
12:13b.MAT.012.013 ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
12:14b.MAT.012.014 ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
12:15b.MAT.012.015 ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
12:16b.MAT.012.016 ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
12:17b.MAT.012.017 ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--
12:18b.MAT.012.018 ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
12:19b.MAT.012.019 ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
12:20b.MAT.012.020 ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
12:21b.MAT.012.021 ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
12:22b.MAT.012.022 ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
12:23b.MAT.012.023 ಆಗ ಜನರೆಲ್ಲರು ವಿಸ್ಮಯ ಗೊಂಡವರಾಗಿ--ಈತನು ದಾವೀದನ ಕುಮಾರ ನಲ್ಲವೇ ಅಂದರು.
12:24b.MAT.012.024 ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
12:25b.MAT.012.025 ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
12:26b.MAT.012.026 ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
12:27b.MAT.012.027 ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು.
12:28b.MAT.012.028 ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ.
12:29b.MAT.012.029 ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
12:30b.MAT.012.030 ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
12:31b.MAT.012.031 ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
12:32b.MAT.012.032 ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
12:33b.MAT.012.033 ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
12:34b.MAT.012.034 ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
12:35b.MAT.012.035 ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
12:36b.MAT.012.036 ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
12:37b.MAT.012.037 ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
12:38b.MAT.012.038 ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ
12:39b.MAT.012.039 ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ.
12:40b.MAT.012.040 ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
12:41b.MAT.012.041 ನ್ಯಾಯವಿಚಾರಣೆಯಲ್ಲಿ ನಿನೆವೆಯ ಜನರು ಈ ಸಂತತಿಯೊಂದಿಗೆ ಎದ್ದು ಅವರನ್ನು ಖಂಡಿಸು ವರು; ಯಾಕಂದರೆ ಯೋನನು ಸಾರಿದಾಗ ಅವರು ಮಾನಸಾಂತರಪಟ್ಟರು; ಮತ್ತು ಇಗೋ, ಇಲ್ಲಿ ಯೋನ ನಿಗಿಂತಲೂ ದೊಡ್ಡವನಿದ್ದಾನೆ.
12:42b.MAT.012.042 ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು; ಇಗೋ, ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ.
12:43b.MAT.012.043 ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
12:44b.MAT.012.044 ಆಗ ಅದು--ನಾನು ಹೊರಟುಬಂದ ನನ್ನ ಮನೆಗೆ ಹಿಂತಿರುಗುವೆನು ಎಂದು ಅಂದುಕೊಂಡು ಬಂದು ಅದು ಬರಿದಾಗಿಯೂ ಗುಡಿಸಿ ಅಲಂಕರಿಸಲ್ಪಟ್ಟದ್ದಾ ಗಿಯೂ ಇರುವದನ್ನು ಕಂಡಿತು.
12:45b.MAT.012.045 ತರುವಾಯ ಅದು ಹೋಗಿ ತನಗಿಂತ ಕೆಟ್ಟವುಗಳಾಗಿರುವ ಬೇರೆ ಏಳು ಆತ್ಮಗಳನ್ನು ಕರಕೊಂಡು ಅವು ಅದರೊಳಗೆ ಪ್ರವೇಶಿಸಿ ವಾಸಮಾಡುತ್ತವೆ; ಹೀಗೆ ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತಲೂ ಕೆಟ್ಟದ್ದಾಗಿರುವದು. ಅದರಂತೆಯೇ ಈ ಕೆಟ್ಟ ಸಂತತಿಗೂ ಆಗುವದು ಎಂದು ಹೇಳಿದನು.
12:46b.MAT.012.046 ಆತನು ಇನ್ನೂ ಜನರ ಸಂಗಡ ಮಾತನಾಡು ತ್ತಿದ್ದಾಗ ಇಗೋ, ಆತನ ತಾಯಿಯೂ ಆತನ ಸಹೋದರರೂ ಆತನೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.
12:47b.MAT.012.047 ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
12:48b.MAT.012.048 ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
12:49b.MAT.012.049 ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
12:50b.MAT.012.050 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
13
13:1b.MAT.013.001 ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
13:2b.MAT.013.002 ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
13:3b.MAT.013.003 ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
13:4b.MAT.013.004 ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು.
13:5b.MAT.013.005 ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು;
13:6b.MAT.013.006 ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
13:7b.MAT.013.007 ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
13:8b.MAT.013.008 ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು.
13:9b.MAT.013.009 ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
13:10b.MAT.013.010 ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
13:11b.MAT.013.011 ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
13:12b.MAT.013.012 ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.
13:13b.MAT.013.013 ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
13:14b.MAT.013.014 ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.
13:15b.MAT.013.015 ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
13:16b.MAT.013.016 ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
13:17b.MAT.013.017 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
13:18b.MAT.013.018 ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:
13:19b.MAT.013.019 ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
13:20b.MAT.013.020 ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
13:21b.MAT.013.021 ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
13:22b.MAT.013.022 ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
13:23b.MAT.013.023 ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
13:24b.MAT.013.024 ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ.
13:25b.MAT.013.025 ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು.
13:26b.MAT.013.026 ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು.
13:27b.MAT.013.027 ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು.
13:28b.MAT.013.028 ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
13:29b.MAT.013.029 ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
13:30b.MAT.013.030 ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
13:31b.MAT.013.031 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
13:32b.MAT.013.032 ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
13:33b.MAT.013.033 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
13:34b.MAT.013.034 ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
13:35b.MAT.013.035 ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
13:36b.MAT.013.036 ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
13:37b.MAT.013.037 ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
13:38b.MAT.013.038 ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
13:39b.MAT.013.039 ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
13:40b.MAT.013.040 ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು.
13:41b.MAT.013.041 ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;
13:42b.MAT.013.042 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
13:43b.MAT.013.043 ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
13:44b.MAT.013.044 ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
13:45b.MAT.013.045 ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
13:46b.MAT.013.046 ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು.
13:47b.MAT.013.047 ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
13:48b.MAT.013.048 ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು.
13:49b.MAT.013.049 ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು.
13:50b.MAT.013.050 ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು.
13:51b.MAT.013.051 ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
13:52b.MAT.013.052 ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
13:53b.MAT.013.053 ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು.
13:54b.MAT.013.054 ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
13:55b.MAT.013.055 ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ?
13:56b.MAT.013.056 ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು.
13:57b.MAT.013.057 ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
13:58b.MAT.013.058 ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
14
14:1b.MAT.014.001 ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
14:2b.MAT.014.002 ಇವನು ಬಾಪ್ತಿಸ್ಮ ಮಾಡಿಸುವ ಯೋಹಾನನೇ; ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ; ಆದದರಿಂದಲೇ ಮಹತ್ಕಾರ್ಯಗಳು ಇವನಲ್ಲಿ ತೋರಿಬರುತ್ತವೆ ಎಂದು ಹೇಳಿದನು.
14:3b.MAT.014.003 ಯಾಕಂದರೆ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿಯಾಗಿದ್ದ ಹೆರೋದ್ಯಳ ನಿಮಿತ್ತವಾಗಿ ಯೋಹಾನನನ್ನು ಹಿಡಿದು ಕಟ್ಟಿ ಸೆರೆಯಲ್ಲಿ ಹಾಕಿದ್ದನು.
14:4b.MAT.014.004 ಯಾಕಂದರೆ ಯೋಹಾನನು--ನೀನು ಅವಳನ್ನು ಇಟ್ಟುಕೊಂಡಿರುವದು ನಿನಗೆ ನ್ಯಾಯವಲ್ಲ ಎಂದು ಅವನಿಗೆ ಹೇಳಿದ್ದನು.
14:5b.MAT.014.005 ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
14:6b.MAT.014.006 ಆದರೆ ಹೆರೋದನ ಹುಟ್ಟಿದ ದಿನವು ಆಚರಿಸಲ್ಪಟ್ಟಾಗ ಹೆರೋದ್ಯಳ ಮಗಳು ಅವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದಳು.
14:7b.MAT.014.007 ಆದದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅವನು ಆಣೆಯಿಟ್ಟು ವಾಗ್ದಾನಮಾಡಿದನು.
14:8b.MAT.014.008 ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
14:9b.MAT.014.009 ಆಗ ಅರಸನು ದುಃಖಪಟ್ಟಾಗ್ಯೂ ತನ್ನ ಆಣೆಯ ನಿಮಿತ್ತದಿಂದಲೂ ತನ್ನೊಂದಿಗೆ ಊಟಕ್ಕೆ ಕೂತಿದ್ದವರ ನಿಮಿತ್ತದಿಂದಲೂ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
14:10b.MAT.014.010 ಮತ್ತು ಅವನು (ಆಳುಗಳನ್ನು) ಕಳುಹಿಸಿ ಸೆರೆಯಲ್ಲಿ ಯೋಹಾನನ ತಲೆಯನ್ನು ಹೊಯಿಸಿದನು.
14:11b.MAT.014.011 ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
14:12b.MAT.014.012 ಆಗ ಅವನ ಶಿಷ್ಯರು ಬಂದು ದೇಹವನ್ನೆತ್ತಿಕೊಂಡು ಹೂಣಿಟ್ಟು ಹೋಗಿ ಯೇಸುವಿಗೆ ತಿಳಿಸಿದರು.
14:13b.MAT.014.013 ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
14:14b.MAT.014.014 ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
14:15b.MAT.014.015 ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
14:16b.MAT.014.016 ಆದರೆ ಯೇಸು ಅವ ರಿಗೆ--ಅವರು ಹೋಗುವದು ಅವಶ್ಯವಿಲ್ಲ; ಅವರು ಊಟಮಾಡುವದಕ್ಕೆ ನೀವೇ ಕೊಡಿರಿ ಎಂದು ಹೇಳಿದನು.
14:17b.MAT.014.017 ಅವರು ಆತನಿಗೆ--ನಮ್ಮ ಹತ್ತಿರ ಐದು ರೊಟ್ಟಿ ಎರಡು ಮಾನುಗಳು ಮಾತ್ರ ಇವೆ ಎಂದು ಹೇಳಿದರು.
14:18b.MAT.014.018 ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.
14:19b.MAT.014.019 ಜನ ಸಮೂಹವು ಹುಲ್ಲಿನಮೇಲೆ ಕೂತುಕೊಳ್ಳಬೇಕೆಂದು ಆತನು ಅಪ್ಪಣೆಕೊಟ್ಟು ಆ ಐದು ರೊಟ್ಟಿ ಎರಡು ಮಾನುಗಳನ್ನು ತಕ್ಕೊಂಡು ಪರಲೋಕದ ಕಡೆಗೆ ನೋಡಿ ಆಶೀರ್ವದಿಸಿ ಮುರಿದು ಆ ರೊಟ್ಟಿಗಳನ್ನು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
14:20b.MAT.014.020 ಅವರೆಲ್ಲರೂ ತಿಂದು ತೃಪ್ತರಾದರು; ಮತ್ತು ಅವರು ಉಳಿದ ತುಂಡುಗಳನ್ನು ಕೂಡಿಸಿ ಹನ್ನೆ ರಡು ಪುಟ್ಟಿಗಳಲ್ಲಿ ತುಂಬಿಸಿದರು.
14:21b.MAT.014.021 ಊಟ ಮಾಡಿ ದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಇದ್ದರು.
14:22b.MAT.014.022 ಕೂಡಲೆ ಯೇಸು ತಾನು ಜನಸಮೂಹಗಳನ್ನು ಕಳುಹಿಸಿ ಬಿಡುವಷ್ಟರೊಳಗಾಗಿ ತನ್ನ ಶಿಷ್ಯರು ದೋಣಿ ಯನ್ನು ಹತ್ತಿ ತನಗಿಂತ ಮುಂಚೆ ಆಚೇ ದಡಕ್ಕೆ ಹೋಗ ಬೇಕೆಂದು ಅವರನ್ನು ಒತ್ತಾಯ ಮಾಡಿದನು.
14:23b.MAT.014.023 ಆತನು ಜನಸಮೂಹಗಳನ್ನು ಕಳುಹಿಸಿದ ಮೇಲೆ ಪ್ರಾರ್ಥನೆ ಮಾಡಲು ಏಕಾಂತವಾಗಿ ಗುಡ್ಡದ ಮೇಲೆ ಹೋದನು; ಸಾಯಂಕಾಲವಾದಾಗ ಆತನೊಬ್ಬನೇ ಅಲ್ಲಿ ಇದ್ದನು.
14:24b.MAT.014.024 ಆಗ ದೋಣಿಯು ಸಮುದ್ರದ ಮಧ್ಯದಲ್ಲಿದ್ದು ತೆರೆಗಳಿಂದ ಬಡಿಯಲ್ಪಡುತ್ತಿತ್ತು; ಯಾಕಂದರೆ ಗಾಳಿಯು ಎದುರಾಗಿತ್ತು.
14:25b.MAT.014.025 ಮತ್ತು ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಬಳಿಗೆ ಹೋದನು.
14:26b.MAT.014.026 ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
14:27b.MAT.014.027 ಆದರೆ ಯೇಸು ತಕ್ಷಣವೇ ಮಾತನಾಡಿ ಅವರಿಗೆ--ಧೈರ್ಯವಾಗಿರ್ರಿ; ನಾನೇ, ಭಯಪಡಬೇಡಿರಿಅಂದನು.
14:28b.MAT.014.028 ಆಗ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನೇ ಆಗಿದ್ದರೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರಲು ನನಗೆ ಅಪ್ಪಣೆಕೊಡು ಅಂದನು.
14:29b.MAT.014.029 ಅದಕ್ಕಾತನು--ಬಾ ಅಂದನು. ಆಗ ಪೇತ್ರನು ದೋಣಿಯಿಂದ ಇಳಿದು ಯೇಸುವಿನ ಬಳಿಗೆ ಹೋಗು ವದಕ್ಕಾಗಿ ನೀರಿನ ಮೇಲೆ ನಡೆದನು.
14:30b.MAT.014.030 ಆದರೆ ಬಲ ವಾದ ಗಾಳಿಯನ್ನು ನೋಡಿದಾಗ ಅವನು ಭಯಪಟ್ಟು ಮುಣುಗುತ್ತಾ--ಕರ್ತನೇ, ನನ್ನನ್ನು ರಕ್ಷಿಸು ಎಂದು ಕೂಗಿ ಹೇಳಿದನು.
14:31b.MAT.014.031 ತಕ್ಷಣವೇ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು--ಓ ಅಲ್ಪ ವಿಶ್ವಾಸಿಯೇ, ನೀನು ಯಾಕೆ ಸಂದೇಹಪಟ್ಟೆ ಎಂದು ಅವನಿಗೆ ಹೇಳಿದನು.
14:32b.MAT.014.032 ಅವರು ದೋಣಿಯೊಳಗೆ ಬಂದಾಗ ಗಾಳಿನಿಂತು ಹೋಯಿತು.
14:33b.MAT.014.033 ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
14:34b.MAT.014.034 ಅವರು ದಾಟಿ ಗೆನೆಜರೇತ್ ಸೀಮೆಗೆ ಬಂದರು.
14:35b.MAT.014.035 ಆಗ ಅಲ್ಲಿದ್ದ ಜನರು ಆತನ ಗುರುತು ಹಿಡಿದು ಸುತ್ತ ಮುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ರೋಗಿಗಳ ನ್ನೆಲ್ಲಾ ಆತನ ಬಳಿಗೆ ತಂದರು.ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
14:36b.MAT.014.036 ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
15
15:1b.MAT.015.001 ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
15:2b.MAT.015.002 ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು.
15:3b.MAT.015.003 ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ?
15:4b.MAT.015.004 ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ.
15:5b.MAT.015.005 ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
15:6b.MAT.015.006 ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
15:7b.MAT.015.007 ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
15:8b.MAT.015.008 ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
15:9b.MAT.015.009 ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
15:10b.MAT.015.010 ಆತನುಜನ ಸಮೂಹಗಳನ್ನು ಕರೆದು ಅವರಿಗೆ--ಕೇಳಿ ತಿಳುಕೊಳ್ಳಿರಿ;
15:11b.MAT.015.011 ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
15:12b.MAT.015.012 ತರುವಾಯ ಆತನ ಶಿಷ್ಯರು ಬಂದು--ಫರಿಸಾ ಯರು ನಿನ್ನ ಈ ಮಾತನ್ನು ಕೇಳಿದ ಮೇಲೆ ಅಭ್ಯಂತರ ಪಟ್ಟರೆಂದು ನಿನಗೆ ತಿಳಿಯಿತೋ ಎಂದು ಕೇಳಿದರು.
15:13b.MAT.015.013 ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
15:14b.MAT.015.014 ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
15:15b.MAT.015.015 ತರುವಾಯ ಪೇತ್ರನು ಪ್ರತ್ಯುತ್ತರವಾಗಿ ಆತ ನಿಗೆ--ಈ ಸಾಮ್ಯವನ್ನು ನಮಗೆ ತಿಳಿಯಪಡಿಸು ಅಂದನು.
15:16b.MAT.015.016 ಅದಕ್ಕೆ ಯೇಸು--ನೀವು ಸಹ ಇನ್ನೂ ಗ್ರಹಿಸದೆ ಇದ್ದೀರಾ?
15:17b.MAT.015.017 ಬಾಯೊಳಗೆ ಹೋಗಿ ಹೊಟ್ಟೆ ಯಲ್ಲಿ ಸೇರುವದೆಲ್ಲವೂ ಬಹಿರ್ಭೂಮಿಗೆ ಹೋಗುವ ದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?
15:18b.MAT.015.018 ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವುಗಳು ಹೃದಯದೊಳಗಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ.
15:19b.MAT.015.019 ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.
15:20b.MAT.015.020 ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
15:21b.MAT.015.021 ತರುವಾಯ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ತೀರಗಳಿಗೆ ಬಂದನು.
15:22b.MAT.015.022 ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
15:23b.MAT.015.023 ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು.
15:24b.MAT.015.024 ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
15:25b.MAT.015.025 ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು.
15:26b.MAT.015.026 ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು.
15:27b.MAT.015.027 ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು.
15:28b.MAT.015.028 ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
15:29b.MAT.015.029 ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
15:30b.MAT.015.030 ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
15:31b.MAT.015.031 ಮೂಕರು ಮಾತನಾಡು ವದನ್ನೂ ಊನವಾದವರು ಸ್ವಸ್ಥರಾಗಿರುವದನ್ನೂ ಕುಂಟರು ನಡೆದಾಡುವದನ್ನೂ ಕುರುಡರು ನೋಡುವ ದನ್ನೂ ಜನಸಮೂಹದವರು ಕಂಡು ಆಶ್ಚರ್ಯದಿಂದ ಇಸ್ರಾಯೇಲಿನ ದೇವರನ್ನು ಮಹಿಮೆಪಡಿಸಿದರು.
15:32b.MAT.015.032 ತರುವಾಯ ಯೇಸು ತನ್ನ ಶಿಷ್ಯರನ್ನು ಕರೆದು-- ನಾನು ಈ ಜನಸಮೂಹವನ್ನು ಕನಿಕರಿಸುತ್ತೇನೆ; ಯಾಕ ಂದರೆ ಈಗ ಬಿಟ್ಟೂಬಿಡದೆ ಮೂರು ದಿನಗಳಿಂದ ಅವರು ನನ್ನೊಂದಿಗಿದ್ದಾರೆ; ಮತ್ತು ಅವರಿಗೆ ತಿನ್ನುವದಕ್ಕೆ ಏನೂ ಇಲ್ಲ; ದಾರಿಯಲ್ಲಿ ಅವರು ಬಳಲಿಹೋದಾರೆಂದು ಅವ ರನ್ನು ಉಪವಾಸವಾಗಿ ಕಳುಹಿಸು
15:33b.MAT.015.033 ಅದಕ್ಕೆ ಆತನ ಶಿಷ್ಯರು ಆತನಿಗೆ--ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ಅರಣ್ಯದಲ್ಲಿ ನಮಗೆ ಎಲ್ಲಿಂದ ರೊಟ್ಟಿಯು ಸಿಕ್ಕೀತು ಅಂದರು.
15:34b.MAT.015.034 ಆಗ ಯೇಸು ಅವರಿಗೆ--ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದನು. ಅವರು--ಏಳು ರೊಟ್ಟಿಗಳು ಮತ್ತು ಕೆಲವು ಚಿಕ್ಕ ಮಾನುಗಳಿವೆ ಅಂದರು.
15:35b.MAT.015.035 ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.
15:36b.MAT.015.036 ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
15:37b.MAT.015.037 ಅವರೆಲ್ಲರೂ ಊಟಮಾಡಿ ತೃಪ್ತರಾದರು; ಮತ್ತು ಅವರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
15:38b.MAT.015.038 ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರು.ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
15:39b.MAT.015.039 ತರುವಾಯ ಆತನು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗ್ದಲ ತೀರಕ್ಕೆ ಬಂದನು.
16
16:1b.MAT.016.001 ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು.
16:2b.MAT.016.002 ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
16:3b.MAT.016.003 ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ?
16:4b.MAT.016.004 ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
16:5b.MAT.016.005 ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
16:6b.MAT.016.006 ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
16:7b.MAT.016.007 ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು.
16:8b.MAT.016.008 ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
16:9b.MAT.016.009 ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
16:10b.MAT.016.010 ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
16:11b.MAT.016.011 ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವದು ಹೇಗೆ ಎಂದು ಹೇಳಿದನು.
16:12b.MAT.016.012 ಆಗ ಅವರು ರೊಟ್ಟೀ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಆತನು ಹೇಳಿದನು ಎಂದು ಅವರು ಗ್ರಹಿಸಿಕೊಂಡರು.
16:13b.MAT.016.013 ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
16:14b.MAT.016.014 ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು.
16:15b.MAT.016.015 ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು.
16:16b.MAT.016.016 ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.
16:17b.MAT.016.017 ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
16:18b.MAT.016.018 ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
16:19b.MAT.016.019 ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ; ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು; ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು.
16:20b.MAT.016.020 ತರುವಾಯ ತಾನು ಕ್ರಿಸ್ತನಾಗಿರುವ ಯೇಸು ಎಂದು ಯಾರಿಗೂ ಹೇಳಬಾರದು ಎಂಬದಾಗಿ ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
16:21b.MAT.016.021 ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
16:22b.MAT.016.022 ತರುವಾಯ ಪೇತ್ರನು ಆತನ ಕೈಹಿಡಿದು--ಕರ್ತನೇ, ಅದು ನಿನ್ನಿಂದ ದೂರವಿರಲಿ; ಇಂಥದ್ದು ನಿನಗೆ ಆಗಬಾರದು ಎಂದು ಹೇಳಿ ಆತನನ್ನು ಗದರಿಸಲಾರಂಭಿಸಿದನು.
16:23b.MAT.016.023 ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
16:24b.MAT.016.024 ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
16:25b.MAT.016.025 ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
16:26b.MAT.016.026 ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
16:27b.MAT.016.027 ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
16:28b.MAT.016.028 ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
17
17:1b.MAT.017.001 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ಸಹೋದರನಾದ ಯೋಹಾನನನ್ನೂ ವಿಂಗಡವಾಗಿ ಕರಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದನು.
17:2b.MAT.017.002 ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
17:3b.MAT.017.003 ಇಗೋ, ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಆತನ ಕೂಡ ಮಾತನಾಡು ತ್ತಿದ್ದರು.
17:4b.MAT.017.004 ಆಗ ಪೇತ್ರನು ಯೇಸುವಿಗೆ--ಕರ್ತನೇ, ಇಲ್ಲಿಯೇ ಇರುವದು ನಮಗೆ ಒಳ್ಳೇದು. ನಿನಗೆ ಮನಸ್ಸಿದ್ದರೆ ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆವು ಎಂದು ಹೇಳಿದನು.
17:5b.MAT.017.005 ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
17:6b.MAT.017.006 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
17:7b.MAT.017.007 ಆಗ ಯೇಸು ಬಂದು ಅವರನ್ನು ಮುಟ್ಟಿ--ಏಳಿರಿ, ಹೆದರಬೇಡಿರಿ ಎಂದು ಹೇಳಿದನು.
17:8b.MAT.017.008 ಅವರು ತಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ನೋಡಲಿಲ್ಲ.
17:9b.MAT.017.009 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಆಜ್ಞಾಪಿಸಿದನು.
17:10b.MAT.017.010 ಆಗ ಆತನ ಶಿಷ್ಯರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
17:11b.MAT.017.011 ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
17:12b.MAT.017.012 ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
17:13b.MAT.017.013 ಬಾಪ್ತಿಸ್ಮ ಮಾಡಿಸುವ ಯೋಹಾನನ ವಿಷಯದಲ್ಲಿ ಆತನು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
17:14b.MAT.017.014 ಅವರು ಜನಸಮೂಹದ ಬಳಿಗೆ ಬಂದಾಗ ಒಬ್ಬ ಮನುಷ್ಯನು ಆತನ ಬಳಿಗೆ ಬಂದು ಮೊಣ ಕಾಲೂರಿ--
17:15b.MAT.017.015 ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
17:16b.MAT.017.016 ನಾನು ಅವನನ್ನು ನಿನ್ನ ಶಿಷ್ಯರ ಬಳಿಗೆ ಕರೆತಂದೆನು; ಅವರು ಅವನನ್ನು ಸ್ವಸ್ಥಮಾಡಲಾರದೆ ಹೋದರು ಎಂದು ಹೇಳಿದನು.
17:17b.MAT.017.017 ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
17:18b.MAT.017.018 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
17:19b.MAT.017.019 ತರುವಾಯ ಶಿಷ್ಯರು ವಿಂಗಡವಾಗಿ ಯೇಸುವಿನ ಬಳಿಗೆ ಬಂದು--ಅದನ್ನು ಬಿಡಿಸುವದಕ್ಕೆ ನಮಗೆ ಯಾಕೆ ಆಗಲಿಲ್ಲ ಎಂದು ಕೇಳಿದರು.
17:20b.MAT.017.020 ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
17:21b.MAT.017.021 ಪ್ರಾರ್ಥನೆ ಉಪವಾಸಗಳಿಂದಲ್ಲದೆ ಈ ತರವಾದದ್ದು ಹೊರಟು ಹೋಗುವದಿಲ್ಲ ಅಂದನು.
17:22b.MAT.017.022 ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
17:23b.MAT.017.023 ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.
17:24b.MAT.017.024 ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.
17:25b.MAT.017.025 ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
17:26b.MAT.017.026 ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
17:27b.MAT.017.027 ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ
18
18:1b.MAT.018.001 ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು ಎಂದು ಕೇಳಿದರು.
18:2b.MAT.018.002 ಆಗ ಯೇಸು ಒಂದು ಚಿಕ್ಕ ಮಗುವನ್ನು ತನ್ನ ಬಳಿಗೆ ಕರೆದು ಅವನನ್ನು ಅವರ ಮಧ್ಯದಲ್ಲಿ ನಿಲ್ಲಿಸಿ--
18:3b.MAT.018.003 ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
18:4b.MAT.018.004 ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
18:5b.MAT.018.005 ಮತ್ತು ಯಾವನಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿ ಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ.
18:6b.MAT.018.006 ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
18:7b.MAT.018.007 ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
18:8b.MAT.018.008 ಆದದರಿಂದ ನಿನ್ನ ಕೈಯಾಗಲೀ ಕಾಲಾಗಲೀ ನಿನ್ನನ್ನು ಅಭ್ಯಂತರಪಡಿಸಿದರೆ ಅವುಗಳನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕೈಯುಳ್ಳವನಾಗಿ ಇಲ್ಲವೆ ಎರಡು ಕಾಲುಳ್ಳವನಾಗಿ ನಿತ್ಯವಾದ ಬೆಂಕಿಗೆ ಹಾಕಲ್ಪಡುವದಕ್ಕಿಂತ ಕುಂಟ ನಾಗಿ ಇಲ್ಲವೆ ಊನನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
18:9b.MAT.018.009 ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
18:10b.MAT.018.010 ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
18:11b.MAT.018.011 ಯಾಕಂದರೆ ಮನುಷ್ಯಕುಮಾರನು ಕಳೆದುಹೋದ ದ್ದನ್ನು ರಕ್ಷಿಸುವದಕ್ಕಾಗಿ ಬಂದನು.
18:12b.MAT.018.012 ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
18:13b.MAT.018.013 ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
18:14b.MAT.018.014 ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
18:15b.MAT.018.015 ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
18:16b.MAT.018.016 ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
18:17b.MAT.018.017 ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
18:18b.MAT.018.018 ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
18:19b.MAT.018.019 ನಾನು ನಿಮಗೆ ತಿರಿಗಿ ಹೇಳುವದೇನಂದರೆ --ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು.
18:20b.MAT.018.020 ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
18:21b.MAT.018.021 ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
18:22b.MAT.018.022 ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;
18:23b.MAT.018.023 ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
18:24b.MAT.018.024 ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.
18:25b.MAT.018.025 ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು.
18:26b.MAT.018.026 ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು.
18:27b.MAT.018.027 ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
18:28b.MAT.018.028 ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು.
18:29b.MAT.018.029 ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು.
18:30b.MAT.018.030 ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
18:31b.MAT.018.031 ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು.
18:32b.MAT.018.032 ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು.
18:33b.MAT.018.033 ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು.
18:34b.MAT.018.034 ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
18:35b.MAT.018.035 ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
19
19:1b.MAT.019.001 ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
19:2b.MAT.019.002 ಜನರ ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿ ಸಿದವು; ಮತ್ತು ಆತನು ಅವರನ್ನು ಅಲ್ಲಿ ಸ್ವಸ್ಥ ಮಾಡಿದನು.
19:3b.MAT.019.003 ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು.
19:4b.MAT.019.004 ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
19:5b.MAT.019.005 ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ?
19:6b.MAT.019.006 ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು.
19:7b.MAT.019.007 ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು.
19:8b.MAT.019.008 ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು.
19:9b.MAT.019.009 ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
19:10b.MAT.019.010 ಆಗ ಆತನ ಶಿಷ್ಯರು ಆತನಿಗೆ-- ಒಬ್ಬ ಮನುಷ್ಯನ ಪರಿಸ್ಥಿತಿ ಯು ತನ್ನ ಹೆಂಡತಿಯೊಂದಿಗೆ ಹೀಗಿರುವದಾದರೆ ಮದು ವೆಯಾಗುವದು ಒಳ್ಳೇದಲ್ಲ ಅಂದಾಗ.
19:11b.MAT.019.011 ಆತನು ಅವರಿಗೆ--ಯಾರಿಗೆ ಇದು ಕೊಡಲ್ಪಟ್ಟಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಅಂಗೀಕರಿಸಲಾರರು.
19:12b.MAT.019.012 ಯಾಕಂದರೆ ತಮ್ಮ ತಾಯಿಯ ಗರ್ಭದಿಂದ ಹುಟ್ಟಿ ದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಮತ್ತು ಕೆಲವರು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟ ವರು ಇದ್ದಾರೆ, ಇನ್ನು ಕೆಲವರು ಪರಲೋಕರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗ ಮಾಡಿ ಕೊಂಡವರೂ ಇದ್ದಾರೆ; ಇದ
19:13b.MAT.019.013 ತರುವಾಯ ಆತನು ತನ್ನ ಕೈಗಳನ್ನಿಟ್ಟು ಪ್ರಾರ್ಥಿಸು ವಂತೆ ಕೆಲವರು ಚಿಕ್ಕಮಕ್ಕಳನ್ನು ಆತನ ಬಳಿಗೆ ತಂದರು. ಆಗ ಶಿಷ್ಯರು ಅವರನ್ನು ಗದರಿಸಿದರು.
19:14b.MAT.019.014 ಆದರೆ ಯೇಸು--ಚಿಕ್ಕಮಕ್ಕಳನ್ನು ಬಿಡಿರಿ, ನನ್ನ ಬಳಿಗೆ ಬಾರ ದಂತೆ ಅವುಗಳಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ಪರಲೋಕರಾಜ್ಯವು ಇಂಥವರದೇ ಅಂದನು.
19:15b.MAT.019.015 ಮತ್ತು ಆತನು ಅವುಗಳ ಮೇಲೆ ತನ್ನ ಕೈಗಳನ್ನಿಟ್ಟು ಅಲ್ಲಿಂದ ಹೊರಟು ಹೋದನು.
19:16b.MAT.019.016 ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.
19:17b.MAT.019.017 ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
19:18b.MAT.019.018 ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
19:19b.MAT.019.019 ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
19:20b.MAT.019.020 ಆಗ ಆ ಯೌವನಸ್ಥನು ಆತನಿಗೆ--ಇವೆಲ್ಲವುಗಳನ್ನು ನಾನು ಬಾಲ್ಯದಿಂದಲೇ ಕೈಕೊಂಡಿದ್ದೇನೆ; ಇನ್ನು ನನಗೇನು ಕಡಿಮೆಯಾಗಿದೆ ಎಂದು ಕೇಳಿದನು.
19:21b.MAT.019.021 ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
19:22b.MAT.019.022 ಆದರೆ ಆ ಯೌವನಸ್ಥನು ಆತನು ಹೇಳಿದ್ದನ್ನು ಕೇಳಿ ದುಃಖ ದಿಂದ ಹೊರಟುಹೋದನು. ಯಾಕಂದರೆ ಅವನಿಗೆ ಬಹಳ ಆಸ್ತಿ ಇತ್ತು.
19:23b.MAT.019.023 ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
19:24b.MAT.019.024 ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
19:25b.MAT.019.025 ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
19:26b.MAT.019.026 ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
19:27b.MAT.019.027 ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು.
19:28b.MAT.019.028 ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
19:29b.MAT.019.029 ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
19:30b.MAT.019.030 ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
20
20:1b.MAT.020.001 ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
20:2b.MAT.020.002 ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
20:3b.MAT.020.003 ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು
20:4b.MAT.020.004 ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು.
20:5b.MAT.020.005 ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು.
20:6b.MAT.020.006 ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು.
20:7b.MAT.020.007 ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು.
20:8b.MAT.020.008 ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.
20:9b.MAT.020.009 ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು.
20:10b.MAT.020.010 ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು.
20:11b.MAT.020.011 ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
20:12b.MAT.020.012 ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
20:13b.MAT.020.013 ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ?
20:14b.MAT.020.014 ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು.
20:15b.MAT.020.015 ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು.
20:16b.MAT.020.016 ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.
20:17b.MAT.020.017 ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ--
20:18b.MAT.020.018 ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
20:19b.MAT.020.019 ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.
20:20b.MAT.020.020 ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು.
20:21b.MAT.020.021 ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು.
20:22b.MAT.020.022 ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
20:23b.MAT.020.023 ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
20:24b.MAT.020.024 ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.
20:25b.MAT.020.025 ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು.
20:26b.MAT.020.026 ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ
20:27b.MAT.020.027 ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ.
20:28b.MAT.020.028 ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
20:29b.MAT.020.029 ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು.
20:30b.MAT.020.030 ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
20:31b.MAT.020.031 ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
20:32b.MAT.020.032 ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು.
20:33b.MAT.020.033 ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
20:34b.MAT.020.034 ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
21
21:1b.MAT.021.001 ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
21:2b.MAT.021.002 ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
21:3b.MAT.021.003 ಮತ್ತು ಯಾವನಾದರೂ ನಿಮಗೆ ಏನಾದರೂ ಹೇಳಿದರೆ ನೀವು ಅವನಿಗೆ--ಅವು ಕರ್ತನಿಗೆ ಬೇಕಾಗಿವೆ ಎಂದು ಹೇಳಿರಿ; ಆಗ ಅವನು ಅವುಗಳನ್ನು ಕೂಡಲೆ ಕಳುಹಿಸುವನು ಎಂದು ಹೇಳಿದನು.
21:4b.MAT.021.004 ಇದೆಲ್ಲವೂ ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರು ವಂತೆ ಆಯಿತು; ಅದೇನಂದರೆ--
21:5b.MAT.021.005 ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
21:6b.MAT.021.006 ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿದರು.
21:7b.MAT.021.007 ಮತ್ತು ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ವಸ್ತ್ರಗಳನ್ನು ಹಾಕಿ ಆತನನ್ನು ಆದರ ಮೇಲೆ ಕೂಡ್ರಿಸಿದರು.
21:8b.MAT.021.008 ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು; ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು.
21:9b.MAT.021.009 ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
21:10b.MAT.021.010 ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
21:11b.MAT.021.011 ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
21:12b.MAT.021.012 ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
21:13b.MAT.021.013 ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
21:14b.MAT.021.014 ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
21:15b.MAT.021.015 ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯ ದಲ್ಲಿ--ದಾವೀದನ ಕುಮಾರನಿಗೆ ಹೊಸನ್ನ ಎಂದು ಕೂಗುವದನ್ನು ಪ್ರಧಾನ ಯಾಜಕರೂ ಶಾಸ್ತ್ರಿಗಳೂ ನೋಡಿ ಕೋಪಗೊಂಡು ಆತನಿಗೆ--
21:16b.MAT.021.016 ಇವರು ಹೇಳುವದೇನೆಂದು ನೀನು ಕೇಳುತ್ತೀಯೋ ಎಂದು ಕೇಳಿದ್ದಕ್ಕೆ ಯೇಸು ಅವರಿಗೆ -- ಹೌದು, ಸಣ್ಣ ಮಕ್ಕಳ ಮತ್ತು ಮೊಲೇಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ ಅಂದನು.
21:17b.MAT.021.017 ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು.
21:18b.MAT.021.018 ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ ಆತನು ಹಸಿದಿದ್ದನು.
21:19b.MAT.021.019 ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
21:20b.MAT.021.020 ಶಿಷ್ಯರು ಅದನ್ನು ನೋಡಿ ಆಶ್ಚರ್ಯ ದಿಂದ --ಎಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ ಎಂದು ಹೇಳಿದನು.
21:21b.MAT.021.021 ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
21:22b.MAT.021.022 ನೀವು ನಂಬುವವ ರಾಗಿ ಪ್ರಾರ್ಥನೆಯಲ್ಲಿ ಏನೇನೂ ಕೇಳುವಿರೋ ಅವುಗಳನ್ನೆಲ್ಲಾ ಹೊಂದುವಿರಿ ಅಂದನು.
21:23b.MAT.021.023 ಆತನು ದೇವಾಲಯಕ್ಕೆ ಬಂದು ಬೋಧಿಸು ತ್ತಿದ್ದಾಗ ಪ್ರಧಾನಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು--ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಮತ್ತು ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು ಎಂದು ಕೇಳಿದರು.
21:24b.MAT.021.024 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ಒಂದು ವಿಷಯ ನಿಮ್ಮನ್ನು ಕೇಳುತ್ತೇನೆ; ಅದನ್ನು ನೀವು ನನಗೆ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇ ನೆಂದು ನಿಮಗೆ ಹೇಳುವೆನು ಎಂದು ಹೇಳಿ--ಯೋಹಾನನ ಬಾಪ್ತಿಸ್ಮವು ಎಲ್ಲಿಂದ ಬಂತು?
21:25b.MAT.021.025 ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
21:26b.MAT.021.026 ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು.
21:27b.MAT.021.027 ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
21:28b.MAT.021.028 ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
21:29b.MAT.021.029 ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.
21:30b.MAT.021.030 ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.
21:31b.MAT.021.031 ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.
21:32b.MAT.021.032 ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
21:33b.MAT.021.033 ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.
21:34b.MAT.021.034 ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.
21:35b.MAT.021.035 ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
21:36b.MAT.021.036 ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
21:37b.MAT.021.037 ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
21:38b.MAT.021.038 ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
21:39b.MAT.021.039 ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು.
21:40b.MAT.021.040 ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
21:41b.MAT.021.041 ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
21:42b.MAT.021.042 ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
21:43b.MAT.021.043 ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
21:44b.MAT.021.044 ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
21:45b.MAT.021.045 ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
21:46b.MAT.021.046 ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
22
22:1b.MAT.022.001 ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ--
22:2b.MAT.022.002 ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
22:3b.MAT.022.003 ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.
22:4b.MAT.022.004 ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
22:5b.MAT.022.005 ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
22:6b.MAT.022.006 ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು.
22:7b.MAT.022.007 ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
22:8b.MAT.022.008 ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.
22:9b.MAT.022.009 ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
22:10b.MAT.022.010 ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು.
22:11b.MAT.022.011 ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
22:12b.MAT.022.012 ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
22:13b.MAT.022.013 ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
22:14b.MAT.022.014 ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
22:15b.MAT.022.015 ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.
22:16b.MAT.022.016 ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
22:17b.MAT.022.017 ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.
22:18b.MAT.022.018 ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ?
22:19b.MAT.022.019 ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು.
22:20b.MAT.022.020 ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು.
22:21b.MAT.022.021 ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
22:22b.MAT.022.022 ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು.
22:23b.MAT.022.023 ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು--
22:24b.MAT.022.024 ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.
22:25b.MAT.022.025 ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು.
22:26b.MAT.022.026 ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು.
22:27b.MAT.022.027 ಕಡೆಯದಾಗಿ ಆ ಸ್ತ್ರೀಯೂ ಸತ್ತಳು.
22:28b.MAT.022.028 ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು.
22:29b.MAT.022.029 ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
22:30b.MAT.022.030 ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.
22:31b.MAT.022.031 ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ--
22:32b.MAT.022.032 ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
22:33b.MAT.022.033 ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು.
22:34b.MAT.022.034 ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು.
22:35b.MAT.022.035 ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ--
22:36b.MAT.022.036 ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು.
22:37b.MAT.022.037 ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
22:38b.MAT.022.038 ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ--
22:39b.MAT.022.039 ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು.
22:40b.MAT.022.040 ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
22:41b.MAT.022.041 ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ--
22:42b.MAT.022.042 ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.
22:43b.MAT.022.043 ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ--
22:44b.MAT.022.044 ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
22:45b.MAT.022.045 ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
22:46b.MAT.022.046 ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
23
23:1b.MAT.023.001 ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --
23:2b.MAT.023.002 ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ;
23:3b.MAT.023.003 ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
23:4b.MAT.023.004 ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
23:5b.MAT.023.005 ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
23:6b.MAT.023.006 ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ
23:7b.MAT.023.007 ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ.
23:8b.MAT.023.008 ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
23:9b.MAT.023.009 ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
23:10b.MAT.023.010 ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು.
23:11b.MAT.023.011 ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.
23:12b.MAT.023.012 ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
23:13b.MAT.023.013 ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
23:14b.MAT.023.014 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.
23:15b.MAT.023.015 ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
23:16b.MAT.023.016 ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ.
23:17b.MAT.023.017 ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?
23:18b.MAT.023.018 ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ.
23:19b.MAT.023.019 ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?
23:20b.MAT.023.020 ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
23:21b.MAT.023.021 ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ.
23:22b.MAT.023.022 ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
23:23b.MAT.023.023 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
23:24b.MAT.023.024 ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
23:25b.MAT.023.025 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
23:26b.MAT.023.026 ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು.
23:27b.MAT.023.027 ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
23:28b.MAT.023.028 ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
23:29b.MAT.023.029 ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
23:30b.MAT.023.030 ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.
23:31b.MAT.023.031 ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
23:32b.MAT.023.032 ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
23:33b.MAT.023.033 ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
23:34b.MAT.023.034 ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
23:35b.MAT.023.035 ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
23:36b.MAT.023.036 ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
23:37b.MAT.023.037 ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
23:38b.MAT.023.038 ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
23:39b.MAT.023.039 ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
24
24:1b.MAT.024.001 ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.
24:2b.MAT.024.002 ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
24:3b.MAT.024.003 ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು.
24:4b.MAT.024.004 ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
24:5b.MAT.024.005 ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
24:6b.MAT.024.006 ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
24:7b.MAT.024.007 ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.
24:8b.MAT.024.008 ಇವೆಲ್ಲವುಗಳು ಸಂಕಟಗಳ ಆರಂಭವು.
24:9b.MAT.024.009 ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.
24:10b.MAT.024.010 ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
24:11b.MAT.024.011 ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.
24:12b.MAT.024.012 ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.
24:13b.MAT.024.013 ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
24:14b.MAT.024.014 ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು.
24:15b.MAT.024.015 ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
24:16b.MAT.024.016 ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
24:17b.MAT.024.017 ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ;
24:18b.MAT.024.018 ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
24:19b.MAT.024.019 ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
24:20b.MAT.024.020 ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ.
24:21b.MAT.024.021 ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ.
24:22b.MAT.024.022 ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
24:23b.MAT.024.023 ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ.
24:24b.MAT.024.024 ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
24:25b.MAT.024.025 ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ.
24:26b.MAT.024.026 ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
24:27b.MAT.024.027 ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು.
24:28b.MAT.024.028 ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
24:29b.MAT.024.029 ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
24:30b.MAT.024.030 ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
24:31b.MAT.024.031 ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
24:32b.MAT.024.032 ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
24:33b.MAT.024.033 ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
24:34b.MAT.024.034 ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
24:35b.MAT.024.035 ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
24:36b.MAT.024.036 ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
24:37b.MAT.024.037 ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
24:38b.MAT.024.038 ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
24:39b.MAT.024.039 ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
24:40b.MAT.024.040 ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು.
24:41b.MAT.024.041 ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
24:42b.MAT.024.042 ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ.
24:43b.MAT.024.043 ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.
24:44b.MAT.024.044 ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
24:45b.MAT.024.045 ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
24:46b.MAT.024.046 ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು.
24:47b.MAT.024.047 ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
24:48b.MAT.024.048 ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು
24:49b.MAT.024.049 ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ
24:50b.MAT.024.050 ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
24:51b.MAT.024.051 ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
25
25:1b.MAT.025.001 ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
25:2b.MAT.025.002 ಅವರಲ್ಲಿ ಐದುಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.
25:3b.MAT.025.003 ಬುದ್ಧಿಹೀನರು ತಮ್ಮ ದೀಪಗಳನ್ನು ತಕ್ಕೊಂಡು ತಮ್ಮೊಂದಿಗೆ ಎಣ್ಣೆಯನ್ನು ತಕ್ಕೊಳ್ಳಲಿಲ್ಲ,
25:4b.MAT.025.004 ಬುದ್ದಿವಂತೆಯರು ತಮ್ಮ ದೀಪಗಳೊ ಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತಕ್ಕೊಂಡರು.
25:5b.MAT.025.005 ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
25:6b.MAT.025.006 ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು.
25:7b.MAT.025.007 ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು;
25:8b.MAT.025.008 ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು.
25:9b.MAT.025.009 ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು.
25:10b.MAT.025.010 ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
25:11b.MAT.025.011 ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.
25:12b.MAT.025.012 ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
25:13b.MAT.025.013 ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
25:14b.MAT.025.014 ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
25:15b.MAT.025.015 ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
25:16b.MAT.025.016 ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.
25:17b.MAT.025.017 ಅದೇ ಪ್ರಕಾರ ಎರಡು ಹೊಂದಿದವನು ಸಹ ಬೇರೆ ಎರಡನ್ನು ಸಂಪಾದಿಸಿದನು.
25:18b.MAT.025.018 ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.
25:19b.MAT.025.019 ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
25:20b.MAT.025.020 ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
25:21b.MAT.025.021 ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
25:22b.MAT.025.022 ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.
25:23b.MAT.025.023 ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
25:24b.MAT.025.024 ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;
25:25b.MAT.025.025 ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.
25:26b.MAT.025.026 ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
25:27b.MAT.025.027 ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗಾಗಿ ಕೊಡತಕ್ಕದ್ದಾಗಿತ್ತು; ನಾನು ಬಂದಾಗ ನನ್ನ ಸ್ವಂತದ್ದನ್ನು ಬಡ್ಡಿ ಸಹಿತವಾಗಿ ಹೊಂದಿ ಕೊಳ್ಳುತ್ತಿದ್ದೆನು.
25:28b.MAT.025.028 ಆ ತಲಾಂತನ್ನು ತೆಗೆದುಕೊಂಡು ಹತ್ತು ತಲಾಂತುಗಳುಳ್ಳವನಿಗೆ ಕೊಡಿರಿ.
25:29b.MAT.025.029 ಇದ್ದ ಪ್ರತಿ ಯೊಬ್ಬನಿಗೆ ಕೊಡಲ್ಪಡುವದು ಮತ್ತು ಅವನಿಗೆ ಸಮೃದ್ಧಿ ಯಾಗುವದು; ಇಲ್ಲದವನ ಕಡೆಯಿಂದ ಅವನಿಗೆ ಇದ್ದದ್ದೂ ತೆಗೆಯಲ್ಪಡುವದು.
25:30b.MAT.025.030 ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
25:31b.MAT.025.031 ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
25:32b.MAT.025.032 ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
25:33b.MAT.025.033 ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
25:34b.MAT.025.034 ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
25:35b.MAT.025.035 ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
25:36b.MAT.025.036 ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು.
25:37b.MAT.025.037 ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ
25:38b.MAT.025.038 ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?
25:39b.MAT.025.039 ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು.
25:40b.MAT.025.040 ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
25:41b.MAT.025.041 ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
25:42b.MAT.025.042 ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ.
25:43b.MAT.025.043 ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
25:44b.MAT.025.044 ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
25:45b.MAT.025.045 ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
25:46b.MAT.025.046 ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
26
26:1b.MAT.026.001 ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ--
26:2b.MAT.026.002 ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.
26:3b.MAT.026.003 ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು
26:4b.MAT.026.004 ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
26:5b.MAT.026.005 ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
26:6b.MAT.026.006 ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದನು.
26:7b.MAT.026.007 ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು.
26:8b.MAT.026.008 ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
26:9b.MAT.026.009 ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
26:10b.MAT.026.010 ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
26:11b.MAT.026.011 ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ.
26:12b.MAT.026.012 ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.
26:13b.MAT.026.013 ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
26:14b.MAT.026.014 ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--
26:15b.MAT.026.015 ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
26:16b.MAT.026.016 ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
26:17b.MAT.026.017 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
26:18b.MAT.026.018 ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು.
26:19b.MAT.026.019 ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.
26:20b.MAT.026.020 ಸಾಯಂಕಾಲ ವಾದಾಗ ಆತನು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕೂತುಕೊಂಡನು;
26:21b.MAT.026.021 ಅವರು ಊಟಮಾಡು ತ್ತಿದ್ದಾಗ ಆತನು--ನಾನು ನಿಮಗೆ ನಿಜವಾಗಿ ಹೇಳು ತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಅಂದನು.
26:22b.MAT.026.022 ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.
26:23b.MAT.026.023 ಅದಕ್ಕೆ ಆತನು ಪ್ರತ್ಯುತ್ತರವಾಗಿ--ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.
26:24b.MAT.026.024 ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
26:25b.MAT.026.025 ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
26:26b.MAT.026.026 ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
26:27b.MAT.026.027 ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ;
26:28b.MAT.026.028 ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
26:29b.MAT.026.029 ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
26:30b.MAT.026.030 ತರುವಾಯ ಅವರು ಕೀರ್ತನೆ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೋದರು.
26:31b.MAT.026.031 ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
26:32b.MAT.026.032 ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂಚಿತ ವಾಗಿ ಗಲಿಲಾಯಕ್ಕೆ ಹೋಗುವೆನು ಅಂದನು.
26:33b.MAT.026.033 ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
26:34b.MAT.026.034 ಯೇಸು ಅವ ನಿಗೆ--ಈ ರಾತ್ರಿಯಲ್ಲಿ ಹುಂಜ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
26:35b.MAT.026.035 ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
26:36b.MAT.026.036 ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು.
26:37b.MAT.026.037 ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
26:38b.MAT.026.038 ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು.
26:39b.MAT.026.039 ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
26:40b.MAT.026.040 ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?
26:41b.MAT.026.041 ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು.
26:42b.MAT.026.042 ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
26:43b.MAT.026.043 ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
26:44b.MAT.026.044 ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
26:45b.MAT.026.045 ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ;
26:46b.MAT.026.046 ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
26:47b.MAT.026.047 ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು.
26:48b.MAT.026.048 ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.
26:49b.MAT.026.049 ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
26:50b.MAT.026.050 ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
26:51b.MAT.026.051 ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.
26:52b.MAT.026.052 ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
26:53b.MAT.026.053 ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ?
26:54b.MAT.026.054 ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
26:55b.MAT.026.055 ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;
26:56b.MAT.026.056 ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
26:57b.MAT.026.057 ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
26:58b.MAT.026.058 ಆದರೆ ಪೇತ್ರನು ಮಹಾ ಯಾಜಕನ ಭವನದವರೆಗೆ ದೂರದಿಂದ ಆತನನ್ನು ಹಿಂಬಾಲಿಸಿ ಒಳಗೆ ಹೋಗಿ ಅಂತ್ಯವೇನಾಗುವದೆಂದು ನೋಡಲು ಸೇವಕರೊಂದಿಗೆ ಕೂತುಕೊಂಡನು.
26:59b.MAT.026.059 ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
26:60b.MAT.026.060 ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
26:61b.MAT.026.061 ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
26:62b.MAT.026.062 ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
26:63b.MAT.026.063 ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
26:64b.MAT.026.064 ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
26:65b.MAT.026.065 ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
26:66b.MAT.026.066 ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು.
26:67b.MAT.026.067 ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
26:68b.MAT.026.068 ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
26:69b.MAT.026.069 ಆಗ ಪೇತ್ರನು ಭವನದ ಹೊರಗೆ ಕೂತಿರಲು ಒಬ್ಬ ಹುಡುಗಿಯು ಅವನ ಬಳಿಗೆ ಬಂದು-- ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು ಅಂದಳು.
26:70b.MAT.026.070 ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು.
26:71b.MAT.026.071 ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು.
26:72b.MAT.026.072 ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು.
26:73b.MAT.026.073 ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
26:74b.MAT.026.074 ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
26:75b.MAT.026.075 ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
27
27:1b.MAT.027.001 ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
27:2b.MAT.027.002 ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
27:3b.MAT.027.003 ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು
27:4b.MAT.027.004 ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
27:5b.MAT.027.005 ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು.
27:6b.MAT.027.006 ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
27:7b.MAT.027.007 ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.
27:8b.MAT.027.008 ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.
27:9b.MAT.027.009 ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
27:10b.MAT.027.010 ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
27:11b.MAT.027.011 ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
27:12b.MAT.027.012 ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
27:13b.MAT.027.013 ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು.
27:14b.MAT.027.014 ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
27:15b.MAT.027.015 ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯವನನ್ನು ಅಧಿಪತಿಯು ಬಿಟ್ಟುಬಿಡುವ ಪದ್ಧತಿ ಯಿತ್ತು.
27:16b.MAT.027.016 ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧನಾದ ಸೆರೆಯವನೊಬ್ಬನು ಅವರಲ್ಲಿ ಇದ್ದನು.
27:17b.MAT.027.017 ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
27:18b.MAT.027.018 ಯಾಕಂದರೆ ಆತನನ್ನು ಅವರು ಹೊಟ್ಟೇಕಿಚ್ಚಿನಿಂದ ಹಿಡುಕೊಟ್ಟಿದ್ದಾರೆಂದು ಅವನಿಗೆ ಗೊತ್ತಿತ್ತು.
27:19b.MAT.027.019 ಅವನು ನ್ಯಾಯಾಸನದ ಮೇಲೆ ಕೂತಿದ್ದಾಗ ಅವನ ಹೆಂಡತಿಯು ಅವ ನಿಗೆ--ನೀನು ಆ ನೀತಿವಂತನ ಗೊಡವೆಗೆ ಹೋಗ ಬೇಡ; ಯಾಕಂದರೆ ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ ಎಂದು ಹೇಳಿಕಳುಹಿಸಿದಳು.
27:20b.MAT.027.020 ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು.
27:21b.MAT.027.021 ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು.
27:22b.MAT.027.022 ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು.
27:23b.MAT.027.023 ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು.
27:24b.MAT.027.024 ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
27:25b.MAT.027.025 ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
27:26b.MAT.027.026 ಆಗ ಅವನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವಂತೆ ಒಪ್ಪಿಸಿದನು.
27:27b.MAT.027.027 ತರುವಾಯ ಅಧಿಪತಿಯ ಸೈನಿಕರು ಯೇಸುವನ್ನು ಸಾಮಾನ್ಯವಾದ ಕೋಣೆಯೊಳಕ್ಕೆ ತೆಗೆದುಕೊಂಡು ಹೋಗಿ ಸೈನಿಕರ ಪೂರ್ಣ ತಂಡವನ್ನು ಆತನ ಮುಂದೆ ಕೂಡಿಸಿದರು.
27:28b.MAT.027.028 ಮತ್ತು ಅವರು ಆತನ ಬಟ್ಟೆಗಳನ್ನು ತೆಗೆದು ರಕ್ತವರ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿದರು.
27:29b.MAT.027.029 ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿ--ಯೆಹೂದ್ಯರ ಅರಸನೇ, ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು.
27:30b.MAT.027.030 ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು.
27:31b.MAT.027.031 ಅವರು ಆತನಿಗೆ ಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ಆತ ನಿಂದ ತೆಗೆದು ಆತನ ಸ್ವಂತವಸ್ತ್ರವನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡು ಹೋದರು.
27:32b.MAT.027.032 ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
27:33b.MAT.027.033 ಆಮೇಲೆ ಅವರು ಗೊಲ್ಗೊಥಾ ಎಂದು ಕರೆಯಲ್ಪಟ್ಟ ಕಪಾಲವೆಂಬ ಸ್ಥಳಕ್ಕೆ ಬಂದರು.
27:34b.MAT.027.034 ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
27:35b.MAT.027.035 ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
27:36b.MAT.027.036 ಮತ್ತು ಅವರು ಕೆಳಗೆ ಕೂತುಕೊಂಡು ಆತನನ್ನು ಕಾಯುತ್ತಿದ್ದರು.
27:37b.MAT.027.037 ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
27:38b.MAT.027.038 ಅಲ್ಲಿ ಒಬ್ಬನನ್ನು ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯ ಲ್ಲಿಯೂ ಇಬ್ಬರು ಕಳ್ಳರನ್ನು ಆತನೊಂದಿಗೆ ಶಿಲುಬೆಗೆ ಹಾಕಿದರು.
27:39b.MAT.027.039 ಅಲ್ಲಿ ಹೋಗುತ್ತಿದ್ದವರು ಆತನನ್ನು ದೂಷಿಸಿ ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ--
27:40b.MAT.027.040 ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ; ಮತ್ತು ನೀನು ದೇವಕುಮಾರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ ಅಂದರು.
27:41b.MAT.027.041 ಅದೇ ಮೇರೆಗೆ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನಿಗೆ ಹಾಸ್ಯ ಮಾಡಿ--
27:42b.MAT.027.042 ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು;
27:43b.MAT.027.043 ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
27:44b.MAT.027.044 ಆತನ ಜೊತೆಗೆ ಶಿಲುಬೆಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಅದೇ ರೀತಿಯಾಗಿ ಆತನನ್ನು ನಿಂದಿಸಿದರು.
27:45b.MAT.027.045 ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
27:46b.MAT.027.046 ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
27:47b.MAT.027.047 ಅಲ್ಲಿ ನಿಂತಿ ದ್ದವರಲ್ಲಿ ಕೆಲವರು ಇದನ್ನು ಕೇಳಿದಾಗ--ಇವನು ಎಲೀಯನನ್ನು ಕರೆಯುತ್ತಾನೆ ಅಂದರು.
27:48b.MAT.027.048 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಕ್ಕೊಂಡು ಅದನ್ನು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.
27:49b.MAT.027.049 ಉಳಿದವ ರು--ಇರಲಿ ಬಿಡು, ಎಲೀಯನು ಬಂದು ಇವನನ್ನು ರಕ್ಷಿಸುವನೇನೋ ನಾವು ನೋಡೋಣ ಅಂದರು.
27:50b.MAT.027.050 ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.
27:51b.MAT.027.051 ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
27:52b.MAT.027.052 ಇದಲ್ಲದೆ ಸಮಾಧಿಗಳು ತೆರೆಯಲ್ಪಟ್ಟವು; ಮತ್ತು ನಿದ್ರೆಹೋದ ಅನೇಕ ಭಕ್ತರ ದೇಹಗಳು ಎದ್ದವು.
27:53b.MAT.027.053 ಆತನು ಪುನರುತ್ಥಾ ನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
27:54b.MAT.027.054 ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಬೇರೆ ಸಂಭವಗಳು ನಡೆದದ್ದನ್ನೂ ನೋಡಿ ಬಹಳವಾಗಿ ಭಯಪಟ್ಟು-- ನಿಜವಾಗಿಯೂ ಈತನು ದೇವಕುಮಾರನಾಗಿದ್ದನು ಅಂದರು
27:55b.MAT.027.055 ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ ಆತನಿಗೆ ಸೇವೆ ಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.
27:56b.MAT.027.056 ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
27:57b.MAT.027.057 ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
27:58b.MAT.027.058 ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು.
27:59b.MAT.027.059 ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ
27:60b.MAT.027.060 ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
27:61b.MAT.027.061 ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
27:62b.MAT.027.062 ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
27:63b.MAT.027.063 ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
27:64b.MAT.027.064 ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ
27:65b.MAT.027.065 ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
27:66b.MAT.027.066 ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.
28
28:1b.MAT.028.001 ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
28:2b.MAT.028.002 ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
28:3b.MAT.028.003 ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
28:4b.MAT.028.004 ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
28:5b.MAT.028.005 ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
28:6b.MAT.028.006 ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
28:7b.MAT.028.007 ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
28:8b.MAT.028.008 ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
28:9b.MAT.028.009 ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
28:10b.MAT.028.010 ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
28:11b.MAT.028.011 ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
28:12b.MAT.028.012 ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
28:13b.MAT.028.013 ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
28:14b.MAT.028.014 ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು.
28:15b.MAT.028.015 ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
28:16b.MAT.028.016 ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
28:17b.MAT.028.017 ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
28:18b.MAT.028.018 ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
28:19b.MAT.028.019 ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
28:20b.MAT.028.020 ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Matthew (Kannada). Matthew (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1E6-E