Ecclesiastes (Kannada)
1
1:1b.ECC.001.001 ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
1:2b.ECC.001.002 ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
1:3b.ECC.001.003 ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
1:4b.ECC.001.004 ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
1:5b.ECC.001.005 ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
1:6b.ECC.001.006 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
1:7b.ECC.001.007 ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
1:8b.ECC.001.008 ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.
1:9b.ECC.001.009 ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
1:10b.ECC.001.010 ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
1:11b.ECC.001.011 ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
1:12b.ECC.001.012 ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
1:13b.ECC.001.013 ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
1:14b.ECC.001.014 ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
1:15b.ECC.001.015 ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
1:16b.ECC.001.016 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
1:17b.ECC.001.017 ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
1:18b.ECC.001.018 ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
2
2:1b.ECC.002.001 ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ.
2:2b.ECC.002.002 ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು.
2:3b.ECC.002.003 ಜ್ಞಾನದಿಂದ ನನ್ನ ಹೃದಯವನ್ನು ಇನ್ನು ಸಂತೋಷಪಡಿಸುವದಕ್ಕಾಗಿ ದ್ರಾಕ್ಷಾರಸಕ್ಕೆ ನನ್ನನ್ನು ನಾನು ಒಪ್ಪಿಸಿ ಕೊಳ್ಳುವಂತೆಯೂ ಆಕಾಶದ ಕೆಳಗೆ ತಮ್ಮ ಜೀವ ಮಾನದಲ್ಲೆಲ್ಲಾ ಮನುಷ್ಯ ಪುತ್ರರಿಗೆ ಒಳ್ಳೆಯದೇನೆಂದು ನೋಡುವ ತನಕ ಬುದ್ಧಿ ಹೀನತೆಯನ್ನು ಹಿಡಿಯುವದಕ್ಕೂ ನಾನು ನನ್ನ ಹೃದಯ ದಲ್ಲಿ ವಿಚಾರ ಮಾಡಿಕೊಂಡೆನು.
2:4b.ECC.002.004 ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.
2:5b.ECC.002.005 ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.
2:6b.ECC.002.006 ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.
2:7b.ECC.002.007 ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
2:8b.ECC.002.008 ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.
2:9b.ECC.002.009 ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
2:10b.ECC.002.010 ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
2:11b.ECC.002.011 ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
2:12b.ECC.002.012 ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
2:13b.ECC.002.013 ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
2:14b.ECC.002.014 ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
2:15b.ECC.002.015 ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
2:16b.ECC.002.016 ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
2:17b.ECC.002.017 ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
2:18b.ECC.002.018 ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
2:19b.ECC.002.019 ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
2:20b.ECC.002.020 ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
2:21b.ECC.002.021 ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
2:22b.ECC.002.022 ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
2:23b.ECC.002.023 ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
2:24b.ECC.002.024 ತನ್ನ ಪ್ರಯಾಸದಲ್ಲಿ ತನ್ನ ಪ್ರಾಣವು ಸುಖವನ್ನು ಅನುಭವಿಸುವಂತೆ ಮಾಡುತ್ತಾ ತಿಂದು ಕುಡಿಯುವ ದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.
2:25b.ECC.002.025 ನನಗಿಂತ ಹೆಚ್ಚಾಗಿ ಯಾವನು ತಿನ್ನಲು ಶಕ್ತನು? ಯಾವನು ಅದಕ್ಕೆ ಆತುರ ಪಡಶಕ್ತನು?ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
2:26b.ECC.002.026 ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
3
3:1b.ECC.003.001 ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
3:2b.ECC.003.002 ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ;
3:3b.ECC.003.003 ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
3:4b.ECC.003.004 ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
3:5b.ECC.003.005 ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ;
3:6b.ECC.003.006 ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ;
3:7b.ECC.003.007 ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
3:8b.ECC.003.008 ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ.
3:9b.ECC.003.009 ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
3:10b.ECC.003.010 ಅದರಲ್ಲಿ ಅಭ್ಯಾಸಿಸುವಂತೆ ಮನು ಷ್ಯರ ಪುತ್ರರಿಗೆ ದೇವರು ಕೊಟ್ಟ ಪ್ರಯಾಸವನ್ನು ನಾನು ಕಂಡಿದ್ದೇನೆ.
3:11b.ECC.003.011 ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
3:12b.ECC.003.012 ಒಬ್ಬನು ಸಂತೋಷಿಸಿ ತನ್ನ ಜೀವಮಾನದಲ್ಲಿ ಒಳ್ಳೇ ದನ್ನು ಮಾಡುವದೇ ಹೊರತು ಅವುಗಳಲ್ಲಿ ಯಾವ ಮೇಲೂ ಇಲ್ಲವೆಂದು ನಾನು ಬಲ್ಲೆನು.
3:13b.ECC.003.013 ಪ್ರತಿ ಯೊಬ್ಬನು ತಿಂದು, ಕುಡಿದು, ತನ್ನ ಎಲ್ಲಾ ಪ್ರಯಾಸದ ಮೇಲನ್ನು ಅನುಭವಿಸುವದು ದೇವರ ದಾನದಿಂದಲೇ.
3:14b.ECC.003.014 ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
3:15b.ECC.003.015 ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
3:16b.ECC.003.016 ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
3:17b.ECC.003.017 ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
3:18b.ECC.003.018 ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
3:19b.ECC.003.019 ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
3:20b.ECC.003.020 ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ; ಎಲ್ಲವು ಗಳೂ ಮಣ್ಣಿನವುಗಳೇ ಮತ್ತು ಎಲ್ಲವೂ ಮಣ್ಣಿಗೆ ಸೇರುತ್ತವೆ.
3:21b.ECC.003.021 ಮನುಷ್ಯನ ಪ್ರಾಣವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಕ್ಕೆ ಹೋಗುತ್ತದೆ ಎಂದೂ ಯಾವನು ತಿಳಿದಾನು?ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
3:22b.ECC.003.022 ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
4
4:1b.ECC.004.001 ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
4:2b.ECC.004.002 ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.
4:3b.ECC.004.003 ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
4:4b.ECC.004.004 ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
4:5b.ECC.004.005 ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
4:6b.ECC.004.006 ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.
4:7b.ECC.004.007 ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
4:8b.ECC.004.008 ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
4:9b.ECC.004.009 ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.
4:10b.ECC.004.010 ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.
4:11b.ECC.004.011 ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?
4:12b.ECC.004.012 ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.
4:13b.ECC.004.013 ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.
4:14b.ECC.004.014 ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.
4:15b.ECC.004.015 ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
4:16b.ECC.004.016 ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
5
5:1b.ECC.005.001 ದೇವರ ಆಲಯಕ್ಕೆ ನೀನು ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಬುದ್ಧಿಹೀನರು ಅರ್ಪಿಸುವ ಯಜ್ಞಕ್ಕಿಂತ, ಹೆಚ್ಚಾಗಿ ಕಿವಿಗೊಡುವದಕ್ಕೆ ಸಿದ್ಧನಾಗಿರು. ಅವರು ತಿಳಿಯದೆ ಕೆಟ್ಟದ್ದನ್ನೇ ಮಾಡು ತ್ತಾರೆ.
5:2b.ECC.005.002 ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
5:3b.ECC.005.003 ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
5:4b.ECC.005.004 ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
5:5b.ECC.005.005 ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
5:6b.ECC.005.006 ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
5:7b.ECC.005.007 ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
5:8b.ECC.005.008 ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
5:9b.ECC.005.009 ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
5:10b.ECC.005.010 ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
5:11b.ECC.005.011 ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
5:12b.ECC.005.012 ಪ್ರಯಾಸಪಡುವವನು ಸ್ವಲ್ಪ ತಿಂದರೂ ಹೆಚ್ಚಾಗಿ ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ; ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆಮಾಡಗೊಡಿಸದು.
5:13b.ECC.005.013 ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
5:14b.ECC.005.014 ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
5:15b.ECC.005.015 ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
5:16b.ECC.005.016 ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
5:17b.ECC.005.017 ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
5:18b.ECC.005.018 ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
5:19b.ECC.005.019 ಪ್ರತಿ ಯೊಬ್ಬ ಮನುಷ್ಯನಿಗೆ ದೇವರು ಕೊಟ್ಟ ಆಸ್ತಿಪಾಸ್ತಿಗ ಳನ್ನೂ ಅವುಗಳನ್ನು ಅನುಭವಿಸುವದಕ್ಕೆ ಆತನು ಕೊಟ್ಟ ಸಾಮರ್ಥ್ಯವನ್ನೂ ಅವನು ತನ್ನ ಪಾಲನ್ನು ತೆಗೆದು ಕೊಂಡು ತನ್ನ ಪ್ರಯಾಸದಲ್ಲಿ ಆನಂದಿಸುವದೂ ದೇವರ ದಾನದಿಂದಲೇ.ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
5:20b.ECC.005.020 ತನ್ನ ಜೀವಿತದ ದಿನಗಳನ್ನು ಅವನು ಹೆಚ್ಚಾಗಿ ಗಣನೆಗೆ ತಾರನು; ತನ್ನ ಹೃದಯದ ಸಂತೋಷ ದಲ್ಲಿ ದೇವರು ಅವನಿಗೆ ಉತ್ತರಕೊಡುತ್ತಾನೆ.
6
6:1b.ECC.006.001 ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
6:2b.ECC.006.002 ತಾನು ಅಪೇಕ್ಷೆ ಪಟ್ಟದ್ದ ರಲ್ಲಿ ಯಾವದೂ ತನ್ನ ಪ್ರಾಣಕ್ಕೆ ಕೊರತೆಯಾಗದಂತೆ ದೇವರು ತನಗೆ ಅನುಗ್ರಹಿಸಿದ ಧನವೂ ಐಶ್ವರ್ಯವೂ ಸನ್ಮಾನವೂ ಇರುವ ಮನುಷ್ಯನಿಗೆ ಅದನ್ನು ಅನುಭವಿಸು ವಂತೆ ಆತನು ಸಾಮರ್ಥ್ಯವನ್ನು ಕೊಡುವದಿಲ್ಲ; ಆದರೆ ಪರನು ಅದನ್ನು ಅನುಭವಿಸುತ್ತಾನೆ; ಇದು ವ್ಯರ್ಥವೂ ಕೆಟ್ಟರೋಗವೂ ಆಗಿದೆ.
6:3b.ECC.006.003 ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.
6:4b.ECC.006.004 ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು.
6:5b.ECC.006.005 ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
6:6b.ECC.006.006 ಹೌದು, ಎರಡು ಸಾವಿರ ದಷ್ಟು ವರುಷಗಳು ಅವನು ಬದುಕಿದರೂ ಅವನು ಸುಖವನ್ನು ಅನುಭವಿಸಲಿಲ್ಲ; ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?
6:7b.ECC.006.007 ಮನುಷ್ಯನ ಪ್ರಯಾಸವೆಲ್ಲಾ ಅವನ ಹೊಟ್ಟೆಗಾಗಿಯೇ ಮತ್ತು ಅವನ ಅಪೇಕ್ಷೆ ತೃಪ್ತಿಹೊಂದುವದಿಲ್ಲ.
6:8b.ECC.006.008 ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
6:9b.ECC.006.009 ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
6:10b.ECC.006.010 ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
6:11b.ECC.006.011 ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
6:12b.ECC.006.012 ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
7
7:1b.ECC.007.001 ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
7:2b.ECC.007.002 ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
7:3b.ECC.007.003 ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
7:4b.ECC.007.004 ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
7:5b.ECC.007.005 ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.
7:6b.ECC.007.006 ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
7:7b.ECC.007.007 ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.
7:8b.ECC.007.008 ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
7:9b.ECC.007.009 ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
7:10b.ECC.007.010 ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
7:11b.ECC.007.011 ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
7:12b.ECC.007.012 ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
7:13b.ECC.007.013 ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.
7:14b.ECC.007.014 ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
7:15b.ECC.007.015 ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
7:16b.ECC.007.016 ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
7:17b.ECC.007.017 ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
7:18b.ECC.007.018 ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
7:19b.ECC.007.019 ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
7:20b.ECC.007.020 ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
7:21b.ECC.007.021 ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ;
7:22b.ECC.007.022 ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
7:23b.ECC.007.023 ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
7:24b.ECC.007.024 ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
7:25b.ECC.007.025 ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
7:26b.ECC.007.026 ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
7:27b.ECC.007.027 ಇಗೋ, ಲೆಕ್ಕವನ್ನು ಕಂಡುಹಿಡಿಯಲು ಒಂದೊಂದನ್ನಾಗಿ ಎಣಿಸಿ ನಾನು ಇದನ್ನು ಕಂಡುಕೊಂಡೆ ನೆಂದು ಪ್ರಸಂಗಿ ಹೇಳುತ್ತಾನೆ:
7:28b.ECC.007.028 ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
7:29b.ECC.007.029 ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
8
8:1b.ECC.008.001 ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
8:2b.ECC.008.002 ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
8:3b.ECC.008.003 ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
8:4b.ECC.008.004 ಅರಸನ ಮಾತು ಎಲ್ಲಿ ದೆಯೋ ಅಲ್ಲಿ ಶಕ್ತಿ ಇದೆ; ನೀನು ಏನು ಮಾಡು ತ್ತಿರುವೆ ಎಂದು ಅವನಿಗೆ ಹೇಳುವವನಾರು?
8:5b.ECC.008.005 ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
8:6b.ECC.008.006 ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.
8:7b.ECC.008.007 ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
8:8b.ECC.008.008 ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
8:9b.ECC.008.009 ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
8:10b.ECC.008.010 ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;
8:11b.ECC.008.011 ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
8:12b.ECC.008.012 ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
8:13b.ECC.008.013 ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.
8:14b.ECC.008.014 ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
8:15b.ECC.008.015 ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ.
8:16b.ECC.008.016 ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
8:17b.ECC.008.017 ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
9
9:1b.ECC.009.001 ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
9:2b.ECC.009.002 ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
9:3b.ECC.009.003 ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
9:4b.ECC.009.004 ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
9:5b.ECC.009.005 ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
9:6b.ECC.009.006 ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
9:7b.ECC.009.007 ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
9:8b.ECC.009.008 ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.
9:9b.ECC.009.009 ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
9:10b.ECC.009.010 ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
9:11b.ECC.009.011 ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
9:12b.ECC.009.012 ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
9:13b.ECC.009.013 ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.
9:14b.ECC.009.014 ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.
9:15b.ECC.009.015 ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
9:16b.ECC.009.016 ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
9:17b.ECC.009.017 ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
9:18b.ECC.009.018 ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
10
10:1b.ECC.010.001 ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
10:2b.ECC.010.002 ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
10:3b.ECC.010.003 ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
10:4b.ECC.010.004 ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
10:5b.ECC.010.005 ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
10:6b.ECC.010.006 ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
10:7b.ECC.010.007 ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
10:8b.ECC.010.008 ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
10:9b.ECC.010.009 ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು.
10:10b.ECC.010.010 ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
10:11b.ECC.010.011 ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
10:12b.ECC.010.012 ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
10:13b.ECC.010.013 ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
10:14b.ECC.010.014 ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
10:15b.ECC.010.015 ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
10:16b.ECC.010.016 ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
10:17b.ECC.010.017 ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
10:18b.ECC.010.018 ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
10:19b.ECC.010.019 ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
10:20b.ECC.010.020 ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
11
11:1b.ECC.011.001 ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
11:2b.ECC.011.002 ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
11:3b.ECC.011.003 ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
11:4b.ECC.011.004 ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
11:5b.ECC.011.005 ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
11:6b.ECC.011.006 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
11:7b.ECC.011.007 ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
11:8b.ECC.011.008 ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
11:9b.ECC.011.009 ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
11:10b.ECC.011.010 ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
12
12:1b.ECC.012.001 ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
12:2b.ECC.012.002 ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು.
12:3b.ECC.012.003 ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
12:4b.ECC.012.004 ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.
12:5b.ECC.012.005 ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
12:6b.ECC.012.006 ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು.
12:7b.ECC.012.007 ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
12:8b.ECC.012.008 ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
12:9b.ECC.012.009 ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
12:10b.ECC.012.010 ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.
12:11b.ECC.012.011 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
12:12b.ECC.012.012 ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ.
12:13b.ECC.012.013 ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
12:14b.ECC.012.014 ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Holder of rights
- Multilingual Bible Corpus
- Citation Suggestion for this Object
- TextGrid Repository (2025). Kannada Collection. Ecclesiastes (Kannada). Ecclesiastes (Kannada). Multilingual Parallel Bible Corpus. Multilingual Bible Corpus. https://hdl.handle.net/21.11113/0000-0016-A1AD-F